• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ `ಹಿಂದಿ ಸಾಹಿತ್ಯಕಾ ವರ್ತಮಾನ ಸ್ವರೂಪ’ ವಿಷಯದ ಕುರಿತ 3 ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಿರಿಯ ಪತ್ರಕರ್ತ ಜಿ.ಯು.ಭಟ್ ಉದ್ಘಾಟಿಸಿದರು

March 7, 2017 by Sachin Hegde Leave a Comment

07 hnr 1 sdm.

ಹೊನ್ನಾವರ:
`ಬದಲಾದ ಸಮಯ ಹಾಗೂ ಪರಿಸ್ಥಿತಿಗೆ ಅನುಗುಣವಾಗಿ ಸಾಹಿತ್ಯ ಪ್ರಕಾರಗಳಲ್ಲೂ ಮಹತ್ತರ ಬದಲಾವಣೆ ಸಂಭವಿಸಿದೆ’ ಎಂದು ಹೈದರಾಬಾದಿನ ಕೇಂದ್ರ ಹಿಂದಿ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಅನಿತಾ ಗಂಗೋಲಿ ಅಭಿಪ್ರಾಯಪಟ್ಟರು.
ಪಟ್ಟಣದ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಆಯೋಜಿಸಲಾದ ಯುಜಿಸಿ ಪ್ರಾಯೋಜಕತ್ವದಲ್ಲಿ ಆರಂಭವಾದ `ಹಿಂದಿ ಸಾಹಿತ್ಯಕಾ ವರ್ತಮಾನ ಸ್ವರೂಪ’ ಎನ್ನುವ ವಿಷಯದ ಕುರಿತ 3 ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬದಲಾದ ಕಾಲಘಟ್ಟದಲ್ಲಿ ಸಣ್ಣಕತೆಗಳು ಹೆಚ್ಚು ಪ್ರಚಲಿತವಾಗಿವೆ. ಓದುಗರಿಗೆ ಸಮಯದ ಅಭಾವವಿದೆ. ಪತ್ರಿಕೆಗಳಲ್ಲಿ ಉದ್ದುದ್ದ ಕಥೆಗಳನ್ನು ಪ್ರಕಟಿಸಲು ಜಾಗವಿಲ್ಲ. ಈ ಎಲ್ಲ ಕಾರಣಗಳಿಗಾಗಿ ಬರವಣಿಗೆಯಲ್ಲೂ ಬದಲಾವಣೆ ಕಂಡು ಬರುತ್ತಿದೆ. ಬರವಣಿಗೆ ಸಶಕ್ತವಾಗಲು ಸಾಹಿತಿಯಲ್ಲಿ ಲೋಕಾನುಭವದ ಅಗತ್ಯವಿದ್ದು ಇಂದಿನ ಕೃತಿಗಳಲ್ಲಿ ಅದರ ಕೊರತೆ ಎದ್ದು ಕಾಣುತ್ತಿದೆ ಎಂದರು.
ವಿಚಾರ ಸಂಕಿರಣ ಉದ್ಘಾಟಿಸಿದ ಹಿರಿಯ ಪತ್ರಕರ್ತ ಜಿ.ಯು.ಭಟ್ ಮಾತನಾಡಿ, `ಸಾಹಿತ್ಯದ ಕೃತಿಗಳ ಪ್ರಕಟಣೆ ಹೆಚ್ಚುತ್ತಿದೆಯಾದರೂ ಇದರ ಪರಿಣಾಮ ಒಟ್ಟಾರೆ ಸಮಾಜ ಹಾಗೂ ಜನಜೀವನದ ಮೇಲೆ ಎಷ್ಟು ಎನ್ನುವುದನ್ನು ಪರಾಮರ್ಶಿಸಬೇಕಿದೆ. ಭಾರತ ದೇಶದಲ್ಲಿ ಅನೇಕ ವೈರುದ್ಧ್ಯಗಳು ಕಂಡುಬರುತ್ತಿದ್ದು ಗೋವಿನ ಪೂಜೆ ಒಂದು ಕಡೆ ನಡೆಯುತ್ತಿದ್ದರೆ ಗೋವನ್ನು ಹಿಂಸಿಸುವ ಜಲ್ಲಿಕಟ್ಟಿನಂತ ಸಂವಿಧಾನ ವಿರೋಧಿ ಧಾರ್ಮಿಕ ಆಚರಣೆಗಳಿಗೆ ಒತ್ತಾಯ ಇನ್ನೊಂದೆಡೆ ಕೇಳಿ ಬರುತ್ತಿದೆ’ ಎಂದರು.
ಪ್ರಾಧ್ಯಾಪಕರಾದ ಪ್ರೊ. ಸಂಜಯ ಶ್ರೀವಾಸ್ತವ ಮೈಸೂರು, ಡಾ. ಪ್ರಭಾ ಭಟ್ಟ ಧಾರವಾಡ, ಪ್ರಾಚಾರ್ಯ ಪ್ರೊ. ಎಸ್.ಎಸ್.ಹೆಗಡೆ ಮಾತನಾಡಿದರು.
ಡಾ. ಸುವರ್ಣಾ ಗಾಡ್ ಸ್ವಾಗತಿಸಿದರು. ಪ್ರೊ. ಐ.ಎ.ಶೇಖ್ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಮುಬಿನಾ ಶೇಖ್, ಸಂತೋಷ ಗುಡಿಗಾರ ನಿರೂಪಿಸಿದರು.

-gaju

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: National News, Other

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...