ಗೋಕರ್ಣ:
ಶ್ರೀ ಷ ಬ್ರ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು , ಶ್ರೀ ಗುರುಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠ ಬೈಲಹೊಂಗಲ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜೆ ನೆರವೇರಿಸಿದರು . ಶ್ರೀ ದೇವಾಲಯದ ವತಿಯಿಂದ ಶಾಲು ಹೊದೆಸಿ , ಫಲ ಸಮರ್ಪಿಸಲಾಯಿತು . ಉಪಾಧಿವಂತ ಮಂಡಳಿ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು . ಪೂಜೆ , ವ್ಯವಸ್ಥೆ ಕುರಿತು ಸ್ವಾಮೀಜಿ ಸಂತಸ ವ್ಯಕ್ತಪಡಿಸಿದರು .
✍? *ಪುಷ್ಪಹಾಸ ಬಸ್ತಿಕರ
Leave a Comment