ಗೋಕರ್ಣ:
ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಶ್ರೀ ಕ್ಷೇತ್ರ ಗೋಕರ್ಣ ಹಾಗೂ ಸುತ್ತಮುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ದ್ವಿತೀಯ ವರ್ಷದ ಕಾರ್ಯಕ್ರಮಕ್ಕೆ 28-03-2017 ಮಂಗಳವಾರ ಚಾಲನೆ ನೀಡಲಾಯಿತು . ಗೋಕರ್ಣದ ಸಮೀಪದ ತಿಪ್ಪಸಗಿ ಗ್ರಾಮದಲ್ಲಿ ನೀರು ವಿತರಿಸುವ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು . ದಾವಣಗೆರೆಯ ಶ್ರೀ ಸಿದ್ಧಾಶ್ರಮದ ಶ್ರೀ ಶ್ರೀ ಪ್ರಭುಲಿಂಗ ಮಹಾಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು . ಈ ಸಂದರ್ಭದಲ್ಲಿ ವೇ. ಶಿವರಾಮ ಮಯ್ಯರ್ , ಶ್ರೀ ಮಂಗಲಮೂರ್ತಿ ಸಭಾಹಿತ – ವಕೀಲರು – ಗೋಕರ್ಣ, ಶ್ರೀ ಲಂಬೋಧರ ಸಭಾಹಿತ , ಹಾಗೂ ತಿಪ್ಪಸಗಿ , ಕಡಿಮೆ ಗ್ರಾಮಸ್ಥರು ಉಪಸ್ಥಿತರಿದ್ದರು .
ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಶ್ರೀ ಪ್ರಭುಲಿಂಗ ಮಹಾಸ್ವಾಮೀಜಿ – ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಮಹಾಬಲೇಶ್ವರ ದೇವಾಲಯದ ವತಿಯಿಂದ ಜರುಗುತ್ತಿರುವ ಈ ಸಮಾಜಮುಖಿ ಯೋಜನೆಯನ್ನು ಶ್ಲಾಘಿಸಿದರು . ಯೋಜನೆಯ ಸದುಪಯೋಗ ಪಡೆಯುವಂತೆ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಕೋರಿದರು .
✍? *ಪುಷ್ಪಹಾಸ ಬಸ್ತಿಕರ
Leave a Comment