• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಾಲಾ ಮಕ್ಕಳಿಗೆ ಉಚಿತ ಲೋಟಗಳ ವಿತರಣೆ

April 7, 2017 by Gaju Gokarna Leave a Comment

ಹೊನ್ನಾವರ:

ಸರ್ಕಾರದಿಂದ ಶಾಲಾ ಮಕ್ಕಳಿಗೆ ಪೌಷ್ಠಿಕವಾದ ಹಾಲು ವಿತರಣೆ ಮಾಡಲಾಗುತ್ತಿದೆ. ಶಾಲೆಗಳಲ್ಲಿ ಹಾಲು ವಿತರಿಸಲು ಲೋಟಗಳ ಕೊರತೆ ಅಲ್ಲಲ್ಲಿ ಕಂಡುಬಂದಿದೆ. ಲೋಟಗಳ ಕೊರತೆ ನಿವಾರಿಸುವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾತ ನಗರ ಹೊನ್ನಾವರ ಇಲ್ಲಿಂದ ಬೇಡಿಕೆ ಬಂದಿರುವುದರಿಂದ ಸ್ವ ಖರ್ಚಿನಿಂದ ಲೋಟಗಳನ್ನು ಪೂರೈಸುತ್ತಿದ್ದೇನೆ, ಎಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶಿವಾನಂದ ಹೆಗಡೆ ಕಡತೋಕಾ ಹೇಳಿದರು.
ಹೊನ್ನಾವರ ಪ್ರಭಾತ ನಗರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲೋಟಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮೊದಲ ಹಂತದಲ್ಲಿ ಹಳದಿಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸದ್ಯದಲ್ಲಿಯೇ ಹಾಲು ವಿತರಿಸಲು ಕೊರತೆ ಇರುವಷ್ಟು ಲೋಟಗಳನ್ನು ವಿತರಿಸುವುದಾಗಿ ತಿಳಿಸಿದರು. ಸರ್ಕಾರದ ಯೋಜನೆಗಳು ಸದುಪಯೋಗಗೊಳ್ಳಬೇಕಾದರೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಹೊನ್ನಾವರದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು ಇದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ.ಎಸ್.ಭಟ್ಟ ಮತ್ತು ಎಲ್ಲಾ ಅಧಿಕಾರಿ ವರ್ಗದವರು ಹಾಗೂ ಉತ್ತಮ ಶಿಕ್ಷಕ ವೃಂದ ಇರುವುದು ಕಾರಣವಾಗಿದೆ ಎಂದರು.
ಕೆ.ಪಿ.ಸಿ.ಸಿ ಸದಸ್ಯರಾದ ವಿನೋದ ನಾಯ್ಕ ಕರ್ಕಿ ಮಾತನಾಡಿ ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಸಮಯ ಸಿಗಲಿದೆ. ಇದರಿಂದ ವಿದ್ಯಾರ್ಥಿಗಳ ಪ್ರತಿಭೆ ಹೆಚ್ಚಲಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗೋಪಾಲಕೃಷ್ಣ ಭಟ್ಟ ಮಾತನಾಡಿ ಹೊನ್ನಾವರದಲ್ಲಿ ದಾನಿಗಳ ಸಹಕಾರದೊಂದಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಶಾಲೆಗಳಲ್ಲಿ ಹಲವು ಸವಲತ್ತುಗಳನ್ನು ಸರ್ಕಾರ ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಇತರ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಸಹಕಾರದೊಂದಿಗೆ ಬಗೆಹರಿಸಲಾಗುವುದು ಎಂದರು.
ಬಿ.ಆರ್.ಸಿ ಸಮನ್ವಯಾಧಿಕಾರಿ ಜಿ.ಎಸ್.ನಾಯ್ಕ ಮಾತನಾಡಿ ಶಿವಾನಂದ ಹೆಗಡೆಯವರು ಒಳ್ಳೆಯ ಕಾರ್ಯ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಉಳಿದ ಅಗತ್ಯವಿರುವ ಶಾಲೆಗಳಿಗೂ ವಿಸ್ತರಿಸಿದರೆ ಉತ್ತಮ ಎಂದರು.
ಶಾಲಾ ಮುಖ್ಯಾಧ್ಯಾಪಕರಾದ ಟಿ.ಕೆ.ಹೆಗಡೆ ಮಾತನಾಡಿ ನಮ್ಮ ಬೇಡಿಕೆಯನ್ನು ಶಿವಾನಂದ ಹೆಗಡೆಯವರು ತಕ್ಷಣ ಪರಿಹರಿಸಿದ್ದಾರೆ. ಅವರಿಗೆ ನಮ್ಮ ಶಾಲೆಯ ವತಿಯಿಂದ ಅಭಿನಂದಿಸುತ್ತೇವೆ ಎಂದರು.
ತಾಲೂಕಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿ ಮತ್ತು ಸಹ ಶಿಕ್ಷಕಿಯಾದ ಕಲ್ಪನಾ ಹೆಗಡೆ ಎಲ್ಲರನ್ನೂ ಸ್ವಾಗತಿಸಿ ನಮ್ಮ ಶಾಲೆಯಲ್ಲಿ ಕೇವಲ ಹದಿನೈದು ಲೋಟಗಳಿದ್ದು 115 ವಿದ್ಯಾರ್ಥಿಗಳಿದ್ದಾರೆ. ಇದರಿಂದಾಗಿ ಹಾಲು ವಿತರಿಸಲು ತೊಂದರೆಯಾಗಿದ್ದು ಲೋಟಗಳನ್ನು ಪೂರೈಸುವಂತೆ ಶಿವಾನಂದ ಹೆಗಡೆಯವರಿಗೆ ಮನವಿ ಮಾಡಲಾಗಿತ್ತು, ಎಂದರಲ್ಲದೆ ಲೋಟಗಳನ್ನು ಪೂರೈಸಿದ್ದಕ್ಕೆ ಧನ್ಯವಾದ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಸಂಜಯ್ ಭಟ್ಟ, ಪಟ್ಟಣ ಪಂಚಾಯತ ಮಾಜಿ ಅಧ್ಯಕ್ಷ ರವೀಂದ್ರ ನಾಯ್ಕ, ಹೊನ್ನಾವರ ಬಿ.ಸಿ.ಸಿ. ಹಿಂದುಳಿದ ವರ್ಗದ ಸೆಲ್ ಅಧ್ಯಕ್ಷ ಹುಲಿಯಣ್ಣ ಗೌಡ, ಮಾರ್ಕೆಟಿಂಗ್ ಸೊಸೈಟಿ ನಿರ್ದೇಶಕ ಬಾಲಚಂದ್ರ ನಾಯ್ಕ, ಸಿ.ಆರ್.ಪಿ ಸುಜಾತಾ ನಾಯ್ಕ, ಬಾಲಚಂದ್ರ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, National News Tagged With: ಪಟ್ಟಣ ಪಂಚಾಯತ, ಪೌಷ್ಠಿಕ, ಪ್ರಭಾತ ನಗರ, ಪ್ರಾಥಮಿಕ ಶಾಲೆ, ಲೋಟ, ವಿದ್ಯಾರ್ಥಿ, ಶಾಲೆ, ಶಿಕ್ಷಣಾಧಿಕಾರಿ, ಸರ್ಕಾರ, ಹಾಲು, ಹೊನ್ನಾವರ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar