ದಾಂಡೇಲಿ :
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾಂಡೇಲಿಯ 2016-17 ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕøತಿಕ ಕ್ರೀಡಾ, ಎನ್.ಎಸ್.ಎಸ್ ಯುವ ರೆಡ್ ಕ್ರಾಸ್ ಹಾಗೂ ವಿವಿಧ ಚಟುವಟಿಕೆಗಳ ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಶುಕ್ರವಾರ ಅಂಬೇಡ್ಕರ್ ಭವನದಲ್ಲಿ ಜರುಗಿತು.
ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸೈಯದ.ಕೆ.ತಂಗಳ ಅವರು ಮಾತನಾಡಿ ನಿರೀಕ್ಷೆಗೂ ಮೀರಿ ಕಾಲೇಜು ಪ್ರಗತಿಯನ್ನು ಸಾಧಿಸುತ್ತಿರುವುದು ಅಭಿನಂದನೀಯ. ಖಾಸಗಿ ಕಾಲೇಜುಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಕಾಲೇಜು ಮುನ್ನುಗ್ಗತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ನಗರ ಸಭೆ ಅದ್ಯಕ್ಷ ಎನ್.ಜಿ.ಸಾಳೊಂಕೆಯವರು ಮಾತನಾಡಿ ವಿದ್ಯಾರ್ಥಿಗಳು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ತಮ್ಮ ಜೀವನವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗಬೇಕೆಂದು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಶುಭ ಹಾರೈಸಿದರು.
ನಗರಸಭೆ ಉಪಾದ್ಯಕ್ಷ ಅಷ್ಪಾಕ್ ಶೇಖ್ ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಳ್ಳುತ್ತಾ ಅತಿ ಹೆಚ್ಚಿನ ಯಶಸ್ಸನ್ನು ವಿದ್ಯಾರ್ಥಿ ಜೀವನದಲ್ಲೇ ಗಳಿಸಬೇಕೆಂದು ಎಂದು ನುಡಿದು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ನಂದೀಶ ಮುಂಗರವಾಡಿ ಇವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ನಗರಸಭೆಯ ಸದಸ್ಯೆ ಯಾಸ್ಮೀನ್ ಕಿತ್ತೂರು, ಶಿಕ್ಷಣ ತಜ್ಞರುಗಳಾದ ಪ್ರೋ. ಪಿ ವಿ ಹೆಗಡೆ ಹಾಗೂ ಪ್ರೋ. ಎಸ್ ವೈ ಹಾದಿಮನಿ ಸಂದರ್ಭೋಚಿತವಾಗಿ ಮಾತನಾಡಿದರು. ಪ್ರಾಚಾರ್ಯ ಡಾ. ನಾಸೀರಹ್ಮದ ಜಂಗೂಭಾಯಿ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕರುಗಳಾದ ಎಸ್.ವಿ ಚಿಂಚಣಿ ಸ್ವಾಗತಿಸಿದರು. ವಾರ್ಷಿಕ ವರದಿಯನ್ನು ಪ್ರಹ್ಲಾದ ಘಾಡಿ ವಾಚಿಸಿದರು. ಡಾ.ಸುಜಾತಾ ಮಗದುಮ್ ವಂದಿಸಿದರು. ಮಂಜುನಾಥ ಚಲವಾದಿ ನಿರೂಪಿಸಿದರು.
Leave a Comment