ಹೊನ್ನಾವರ:
ತಾಲೂಕಿನ ಕೆರೆಕೋಣದಲ್ಲಿ `ನಾಡು ನುಡಿಯ ಪುನರ್ ನಿರೂಪಣೆ: ಹೊಸ ತಲೆಮಾರು’ ಎನ್ನುವ ವಿಷಯದ ಮೇಲೆ 8 ನೇ ರಾಜ್ಯ ಮಟ್ಟದ ಸಾಹಿತ್ಯೋತ್ಸವ ನಡೆಯುತ್ತಿದ್ದು ಸರ್ವಾಧ್ಯಕ್ಷರಾಗಿ ಖ್ಯಾತ ವಿಮರ್ಶಕರು, ಸಾಹಿತ್ಯ ಸಂಸ್ಕøತಿ ಚಿಂತಕರಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಡಾ. ಶಿವರಾಮ ಪಡಿಕಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಡಾ. ಆರ್.ವಿ.ಭಂಡಾರಿಯವರ ನೆನಪಿನಲ್ಲಿ ಒಂದು ಸಾಂಸ್ಕøತಿಕ ಕೇಂದ್ರ ಕಟ್ಟುವ ಜವಾಬ್ದಾರಿಯ ಭಾಗವಾಗಿ ಅವರದೇ ಮನೆಯಂಗಳದಲ್ಲಿ ನಡೆಯುವ ಈ ಉತ್ಸವದಲ್ಲಿ ತಾವು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ `ಸಹಯಾನ’ದ ಅಧ್ಯಕ್ಷ ಶಾಂತಾರಾಮ ನಾಯಕ ಹಿಚ್ಕಡ, ಕಾರ್ಯಾಧ್ಯಕ್ಷ ವಿಷ್ಣು ನಾಯ್ಕ, ಕಾರ್ಯದರ್ಶಿ ವಿಠ್ಠಲ ಭಂಡಾರಿ ಕೆರೆಕೋಣ, ಖಜಾಂಚಿ ಮಾಸ್ತಿ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment