ದಾಂಡೇಲಿ :
ಮಾಜಿ ಶಾಸಕ ಸುನೀಲ ಹೆಗಡೆಯವರ ಜನ್ಮ ದಿನಾಚರಣೆಯನ್ನು ನಗರದ ಸುನೀಲ ಹೆಗಡೆ ಬ್ರಿಗೇಡ್ ವತಿಯಿಂದ ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು.
ಜನ್ಮ ದಿನದ ನಿಮಿತ್ತ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪಕ್ಷದ ಎಸ್.ಸಿ.ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ, ಪಕ್ಷ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ರಫೀಕ ಹುದ್ದಾರ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ನರೇಂದ್ರ ಚೌವ್ಹಾಣ್, ಸುಭಾಷ ಅರವೇಕರ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪಾಟೀಲ, ಮುಖಂಡರುಗಳಾದ ಟಿ.ಎಸ್. ಬಾಲಮಣಿ ಬೇಟಾ, ಚಂದ್ರಕಾಂತ ಕ್ಷೀರಸಾಗರ, ಗುರು ಮಠಪತಿ, ಭೀಮಶಿ ಬುಡೋಳಿ, ಟ್ರ್ಯಾಕ್ಷಿ ಅಶೋಸಿಯೇಶನ್ ಅಧ್ಯಕ್ಷ ಅಶೋಕ ನಾಯ್ಕ, ಸಾರ್ವಜನಿಕ ಆಸ್ಪತ್ರೆಯ ವೈದ್ಯರುಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
Leave a Comment