• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

May 3, 2017 by Yuvagni News Leave a Comment

ಕಾರವಾರ:
ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು, ಈ ಹಿನ್ನೆಲೆಯಲ್ಲಿಯೇ ಭಗೀರಥ ಪ್ರಯತ್ನ ಎಂಬ ನುಡಿ ಚಾಲ್ತಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಮಂಗಳವಾರ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಭಗೀರಥ ಜಯಂತಿ ಹಾಗೂ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಗೀರಥ ತನ್ನ ಛಲ ಪರಿಶ್ರಮದಿಂದ ಗಂಗೆಯನ್ನು ಭೂಲೋಕಕ್ಕೆ ಕರೆತಂದ ಪ್ರತೀತಿಯಿದೆ. ಇಂತಹ ಛಲ ಮತ್ತು ಪರಿಶ್ರಮ ನಮಗೂ ಸ್ಪೂರ್ತಿಯಾಗಬೇಕಿದೆ. ಪೌರಾಣಿಕ ಮಹಾಪುರುಷರಿಂದ ಕಲಿಯಬೇಕಾದುದು ಬಹಳಷ್ಟಿದೆ ಎಂದು ಹೇಳಿದರು.
ಆದ್ಯ ವಚನಕಾರನಾಗಿರುವ ದೇವರ ದಾಸಿಮಯ್ಯ ವಚನಗಳ ಮೂಲಕ ಸಾಮಾಜಿಕ ಬದಲಾವಣೆಗೆ ಕಾರಣರಾದವರು. ಕಾಯಕವನ್ನೇ ಕೈಲಾಸ ಎಂದು ಸಾರಿದ ವಚನಕಾರರು ಸಾಮಾಜಿಕ ಹಾಗೂ ಆರ್ಥಿಕ ಸಮಾನತೆ ಕುರಿತು ತಮ್ಮ ವಚನಗಳ ಮೂಲಕ ಸಾರಿದವರು. ವಚನಕಾರರ ನುಡಿಗಳು ಎಂದಿಗೂ ಪ್ರಸ್ತುತವಾಗಿವೆ ಎಂದರು.
ದೇವರ ದಾಸಿಮಯ್ಯ ಕುರಿತಾಗಿ ಉಪನ್ಯಾಸಕಿ ಶ್ರೀದೇವಿ ಕೆರಮನೆ ಮಾತನಾಡಿ, ಸಮಾಜದ ಮೇಲು ಕೀಳು, ಅಸಮಾನತೆ ಕುರಿತು ದೇವರ ದಾಸಿಮಯ್ಯ ಅವರು ತಮ್ಮ ವಚನಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದಾರೆ ಎಂದು ಹೇಳಿದರು.
ರಾಜರ್ಷಿ ಭಗೀರಥ ಕುರಿತು ಮಾತನಾಡಿದ ಉಪನ್ಯಾಸಕ ವೆಂಕಟೇಶ ಗಿರಿ, ತನ್ನ ನಿರಂತರ ತಪಸ್ಸು ಹಾಗೂ ಪರಿಶ್ರಮದ ಮೂಲಕ ಸಾಕ್ಷಾತ್ ಗಂಗೆಯನ್ನೇ ಭೂಮಿಗೆ ಕರೆತಂದ ಮಹಾನ್ ವ್ಯಕ್ತಿತ್ವ ಭಗೀರಥ. ಉಪ್ಪಾರ ಸಮಾಜದ ಆರಾಧ್ಯ ದೈವವಾಗಿರುವ ಭಗೀರಥ, ಛಲ ಪರಿಶ್ರಮಕ್ಕೆ ಮಾದರಿಯಾಗಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್ ಸ್ವಾಗತಿಸಿದರು. ಗಣೇಶ ಬಿಷ್ಠಣ್ಣನವರ್ ಕಾರ್ಯಕ್ರಮ ನಿರೂಪಿಸಿದರು.
ಆಕರ್ಷಕ ಮೆರವಣಿಗೆ: ಇದಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಗೀರಥ ಹಾಗೂ ದೇವರದಾಸಿಮಯ್ಯ ಅವರ ಭಾವಚಿತ್ರದ ಮೆರವಣಿಗೆಗೆ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಅವರು ದೀಪ ಬೆಳಗಿ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಕಲಾವಿದರ ತಾಷಾರಾಮ್‍ಡೋಲ್ ತಂಡ, ಮಹಿಳೆಯರ ಬುಡಕಟ್ಟು ಕುಣಿತ, ಧಾರವಾಡದ ಜಗ್ಗಲಿಗೆ ಕಲಾವಿದರು, ಗದಗಿನ ಡೊಳ್ಳು ಕುಣಿತ, ಅಮದಳ್ಳಿಯ ಕಲಾವಿದರ ಸುಗ್ಗಿ ಕುಣಿತ ಆಕರ್ಷಕವಾಗಿದ್ದವು. ಕಳಸ ಹೊತ್ತ ಮಹಿಳೆಯರು ಮೆರವಣಿಗೆಗೆ ಮೆರಗು ತಂದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, National News Tagged With: ಅನ್ವರ್ಥ, ಎಸ್.ಎಸ್.ನಕುಲ್, ಕನ್ನಡ, ಛಲ, ಜಿಲ್ಲಾ ಪಂಚಾಯತ್, ಜಿಲ್ಲಾಧಿಕಾರಿ, ನಿರಂತರ, ನಿಷ್ಠೆ, ಪರಿಶ್ರಮ, ಭಗೀರಥ, ಮತ್ತು, ರಂಗಮಂದಿರ, ರಾಜರ್ಷಿ, ವಚನ, ಸಂಸ್ಕøತಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar