ಕಾರವಾರ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.
ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ರಂಗಮಂದಿರದಲ್ಲಿ ‘ಜನಮನ’ ಫಲಾನುಭವಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಮನಸ್ವಿನಿ, ವಿದ್ಯಾಸಿರಿ, ಬಿದಾಯಿ, ಕೃಷಿಭಾಗ್ಯ, ಪಶುಭಾಗ್ಯ, ವಸತಿಭಾಗ್ಯ ಸೇರಿದಂತೆ ಹಲವು ಯೋಜನೆಗಳ ಆಯ್ದ ಫಲಾನುಭವಿಗಳು ಭಾಗವಹಿಸಿ ಸಚಿವರೊಂದಿಗೆ ಸಂವಾದದಲ್ಲಿ ಪಾಲ್ಗೊಳ್ಳುವರು.
ಶಾಸಕ ಸತೀಶ ಕೃಷ್ಣಾ ಸೈಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಮೋಹನ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ, ಸಂಸದ ಅನಂತಕುಮಾರ ಹೆಗಡೆ, ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವರಾಮ ಹೆಬ್ಬಾರ, ಮಂಕಾಳು ವೈದ್ಯ, ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ಎಲ್.ಘೋಟ್ನೇಕರ್, ಎಸ್.ವಿ.ಸಂಕನೂರು, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಜೇಂದ್ರ ನಾಯ್ಕ, ನಗರಸಭೆ ಅಧ್ಯಕ್ಷ ಗಣಪತಿ ವಿ.ನಾಯ್ಕ, ಜಿಲ್ಲಾ ಪಂಚಾಯತ್ ಉಪಾದ್ಯಕ್ಷ ಸಂತೋಷ ಶಂಕರ ರೇಣಕೆ, ತಾಲೂಕ ಪಂಚಾಯತ್ ಅಧ್ಯಕ್ಷೆ ಪ್ರಮೀಳಾ ಸುರೇಶ ನಾಯ್ಕ ಭಾಗವಹಿಸುವರು. ಸರ್ಕಾರವೇ ರೂಪುಗೊಳಿಸಿ, ಅನುಷ್ಟಾನಗೊಳಿಸಿದ ಈ ಯೋಜನೆಗಳು ಸಮಾಜದ ಎಲ್ಲಾ ವರ್ಗದ ಜನರನ್ನು ನಿರೀಕ್ಷಿಸಿದಂತೆ ತಲುಪುತ್ತಿದೆಯೇ, ಸರ್ಕಾರದ ಮೂಲ ಉದ್ದೇಶ ಈಡೇರಿದೆಯೇ, ಇವುಗಳನ್ನು ಇನ್ನಷ್ಟು ಜನರಿಗೆ ಹೇಗೆ ತಲುಪಿಸಬಹುದು, ಮತ್ತಷ್ಟು ಪರಿಣಾಮಕಾರಿಯಾಗಿ ಹೇಗೆ ಅನುಷ್ಟಾನಗೊಳಿಸಬಹುದು ಇತ್ಯಾದಿಗಳಿಗೆ ಫಲಾನುಭವಿಗಳಿಂದಲೇ ನೇರವಾಗಿ ಕೇಳಿ ತಿಳಿದುಕೊಳ್ಳುವ ಕಾರ್ಯಕ್ರಮ ಇದಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
***************************************************
ಕಾರವಾರ ಸಹಕಾರ ರೈತರ ಆರೋಗ್ಯ ಯೋಜನೆ ಮತ್ತು ನಗರ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಗಳಡಿಯಲ್ಲಿ ಯಶಸ್ವಿನಿ ಫಲಾನುಭವಿಗನ್ನು ನೋಂದಾಯಿಸಲು ಅಧಿಸೂಚನೆ ಹೊರಡಿಸಲಾಗಿದ್ದು, ಮೇ 1 ರಿಂದ ಸಹಕಾರ ಸಂಘಗಳ ಸದಸ್ಯರುಗಳು ಸಂ¨ಂಧಪಟ್ಟ ಸಹಕಾರ ಸಂಘಗಳು/ಬ್ಯಾಂಕುಗಳು ಮೂಲಕ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಕುಮಟಾ ದೂರವಾಣಿ ಸಂಖ್ಯೆ 08386-222270, ಶಿರಸಿ,08384-236452,ಕಾರವಾರ 08382-226321, ಜಿಲ್ಲಾ ಸಮನ್ವಯ ಅಧಿಕಾರಿ 9342848657 ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ ಶಾಖಾ ವ್ಯವಸ್ಥಾಪಕರುಗಳನ್ನು ಸಂಪರ್ಕಿಸಲು ಕಾರವಾರ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.
Leave a Comment