ಭಟ್ಕಳ:
ಸಂಗಾತಿ ರಂಗಭೂಮಿ(ರಿ.) ಅಂಕೋಲಾ ಹಾಗೂ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಭಟ್ಕಳ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಯೋಜಕ ಎಂ. ಆರ್. ನಾಯ್ಕ ಮಾತನಾಡಿ ಮಕ್ಕಳಿಗೆ ಆಧ್ಯಾತ್ಮಿಕ, ಸಾಮಾಜಿಕ, ಆರ್ಥಿಕ ಸಾಕ್ಷರತೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ ಹಾಗೂ ಬ್ಯಾಂಕುಗಳ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಅಷ್ಟೇ ಅಲ್ಲದೇ ಹತ್ತು ವರ್ಷ ಮೇಲ್ಪಟ್ಟ ಮಕ್ಕಳು ಅವರ ಖಾತೆಯನ್ನು ಬ್ಯಾಂಕುಗಳಲ್ಲಿ ತೆರೆದು ಡೆಬಿಟ್ ಕಾರ್ಡ ಪಡೆದು ಖಾತೆಯನ್ನು ಚಲಾವಣೆ ಮಾಡುವುದರ ಬಗ್ಗೆಯೂ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಎಮ್.ಕೆ. ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸುಶೀಲಾ ನಾಯ್ಕ, ಕಿರಿಯ ಆರ್ಥಿಕ ಸಾಕ್ಷರತಾ ಸಂಯೋಜಕ ದಯಾನಂದ ಗುಂಡು ಉಪಸ್ಥಿತರಿದ್ದರು. ಶಿಬಿರದಲ್ಲಿ ಸುಮಾರು 68 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು.
Leave a Comment