ಭಟ್ಕಳ:
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತಿದ್ದು ಸರಿಪಡಿಸಿ ಯಥಾಸ್ಥಿತಿಯನ್ನು ಕಾಯ್ದುಕೊಂಡು ಹೋಗಬೇಕು ಎಂದು ನಾಗರೀಕ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ ನೀಡಲಾಯಿತು.
ಮನವಿಯಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕಟಾಪುರ ಗ್ರಾಮದ ಮುರಿನಕಟ್ಟೆಯಲ್ಲಿರುವ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಕಟ್ಟೆಯನ್ನು ವಶಪಡಿಸಿಕೊಂಡಿದ್ದು ಇಲ್ಲಿನ ನಡೆಯಲಿರುವ ವಾರ್ಷಿಕ ಕಾರ್ಯಕ್ರಮಕ್ಕೆ ಇದರಿಂದ ತೊಂದರೆಯಾಗುತ್ತದೆ.
ವರ್ಷಂಪ್ರತಿ ಅಮ್ಮನವರ ಪೂಜೆ, ಇತರ ಧಾರ್ಮಿಕ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು ಕಟ್ಟೆಯನ್ನು ವಶಕ್ಕೆ ಪಡೆಯುವದರಿಂದ ಹಿಂಧೂಗಳ ಭಾವನೆಗೆ ಧಕ್ಕೆಯುಂಟಾಗಲಿದೆ. ಅನಾದಿಕಾಲದಿಂದಲೂ ಹಿಂದೂಗಳ ಧಾರ್ಮಿಕ ಆಚರಣೆಯನ್ನು ನಡೆಸಿಕೊಂಡು ಬಂದಿರುವ ಈ ಸ್ಥಳವನ್ನು ಕಾಪಾಡಿಕೊಂಡು ಹೋಗಲು ಹಾಗೂ ಯಥಾಸ್ಥಿತಿಯನ್ನು ಕಾಪಾಡಿಕೊಂಡು ಹೋಗಲು ಸೂಚಿಸ ಬೇಕು ಎಂದೂ ವಿನಂತಿಸಿಲಾಗಿದೆ. ಈ ಸಂದರ್ಭದಲ್ಲಿ ದತ್ತಾತ್ರೇಯ ನಾಯ್ಕ, ಶ್ರೀಧರ ನಾಯ್ಕ, ಪುಂಡಲೀಕ ಪೈ ಮುಂತಾದವರು ಉಪಸ್ಥಿತರಿದ್ದರು
Leave a Comment