ಕಾರವಾರ:
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ ಕಾರ್ಯಕ್ರಮಗಳಿಗೆÉ 2426. ಲಕ್ಷ ರೂ. ಅನುದಾನ ಹಂಚಿಕೆ ಮಾಡಲಾಗಿದ್ದು 2017-18ನೇ ಸಾಲಿನಲ್ಲಿ ಯೋಜನೆ ಮತ್ತು ಯೋಜನೇತರ ಲೆಕ್ಕ ಶಿರ್ಷೀಕೆಯಡಿ ಪ್ರತ್ಯೆಕವಾಗಿ ಯಾವುದೇ ಅನುದಾನ ಒದಗಿಸಿರುವದಿಲ್ಲ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಅದಿನ ಅಧಿಕಾರಿಗಳ ಮತ್ತು ನೌಕರರ ವೇತನಾಂಶಕ್ಕಾಗಿ ಜಿಲ್ಲಾ ಪಂಚಾಯತ್ದಲ್ಲಿ 7663 ಲಕ್ಷ ಹಾಗೂ ತಾಲೂಕು ಪಂಚಾಯತ್ ಅಧಿಕಾರಿ ನೌಕರರ ವೇತನಕ್ಕಾಗಿ 40319.85 ಲಕ್ಷ ಒಟ್ಟು 47982.85 ಲಕ್ಷ ರೂ. ಮಿÀಡಿಸಲಾಗಿದೆ. ಉಳಿದಂತೆ ಜಿಲ್ಲಾ ಪಂಚಾಯತ ಅದೀನ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಕಚೇರಿಗಳ ಸಾದಿಲ್ವಾರು ವೆಚ್ಚ ಮತ್ತು ಇತರೇ ವೆಚ್ಚಕ್ಕಾಗಿ ಜಿಲ್ಲಾ ಪಂಚಾಯತಕ್ಕೆ 16991.89 ಲಕ್ಷ ಮತ್ತು ತಾಲೂಕು ಪಂಚಾಯತಕ್ಕೆ 10937.44 ಲಕ್ಷಗಳನ್ನು ಮೀಸಲಿಡಲಾಗಿದೆ. ಲೆಕ್ಕ ಶೀರ್ಷಿಕೆಗೆ ಸಂಬಂದಿಸಿದಂತೆ ಶಿಕ್ಷಣ, ಗ್ರಾಮೀಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶ್ಚಿಮ ಘಟ್ಟ ಅಭಿವೃದ್ಧಿ ಯೋಜನೆ, ವಿಶೇಷ ಘಟಕ ಯೋಜನೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯ ಇಲಾಖೆ, ವಯಸ್ಕರ ಶಿಕ್ಷಣ, ಕ್ರೀಡೆ ಮತ್ತು ಯುವಜನ ಸೇವೆ, ಗ್ರಾಮೀಣ ನೀರು ಪೂರೈಕೆ, ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೌಷ್ಟಿಕ ಆಹಾರ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಾಮಾಜಿಕ ಅರಣ್ಯ, ಸಹಕಾರ, ಪ್ರದೇಶಾಭಿವೃದ್ಧಿ ಮತ್ತು ಇತರ ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳು, ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ, ಸಣ್ಣ ನೀರಾವರಿ, ಗ್ರಾಮೋದ್ಯಮ ಮತ್ತು ಸಣ್ಣ ಉದ್ಯಮಗಳು, ರೇಷ್ಮೆ, ರಸ್ತೆ ಮತ್ತು ಸೇತುವೆಗಳು, ಕೈಮಗ್ಗ ಮತ್ತು ಜವಳಿ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಮತ್ತು ಇತರ ವಲಯಗಳಿಗೆ ಕಳೆದ ಸಾಲಿನಲ್ಲಿ ಒದಗಿಸಿದ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು 2017-18ನೇ ಸಾಲಿಗೆ ಒದಗಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸಂತೋಷ ರೇಣಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಾನಂದ ಆರ್.ಹೆಗಡೆ, ಶಿಕ್ಷಣ ಮತ್ತು ಆರೋಗ್ಯಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಮಣ ಟಿ.ಪಾಟೀಲ,ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ದೊಡಮನಿ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕ ಪಂಚಾಯತ್ ಅಧ್ಯಕ್ಷೆ ಮತ್ತು ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Leave a Comment