ಕಾರವಾರ:
ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ.
ಈ ವರ್ಷದ ಜೀವವವೈವಿಧ್ಯ ದಿನಾಚರಣೆಯ ಘೋಷಣೆಯು ಜೀವವೈವಿಧ್ಯ ಮತ್ತು ಸುಸ್ಥಿರ ಪ್ರವಾಸೋಧ್ಯಮ ಎಂದಾಗಿದೆ. ಈ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ದಿನಾಂಕ 21 ಮೇ 2017 ರಂದು ಮಧ್ಯಾಹ್ನ 3.00 ಗಂಟೆಗೆ ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. 12 ವರ್ಷದೊಳಗಿನ ವಿದ್ಯಾರ್ಥಿಗಳು ಮತ್ತು 12 ವರ್ಷದ ಮೇಲಿನ ವಿದ್ಯಾರ್ಥಿಗಳಿಗಾಗಿ (18 ವರ್ಷದ ಒಳಗೆ) ಎರಡು ವಿಭಾಗಗಳಲ್ಲಿ ಸ್ಪರ್ಧೆಯನ್ನು ನಡೆಸಲಾಗುವುದು. ಚಿತ್ರಕಲಾ ಸ್ಪರ್ಧೆಯ ವಿಷಯ ಜೀವವೈವಿಧ್ಯ ಮತ್ತು ಸುಸ್ಥಿರ ಪ್ರವಾಸೋದ್ಯಮ ಎಂದಾಗಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ವಿಜ್ಞಾನ ಕೇಂದ್ರ, ಕೋಡಿಬಾಗ, ಕಾರವಾರದಲ್ಲಿ ನೊಂದಾಯಿಸಬೇಕಾಗಿ ವಿಜ್ಞಾನ ಕೇಂದ್ರ ಪ್ರಕಟಣೆ ತಿಳಿಸಿದೆ.
Leave a Comment