ಭಟ್ಕಳ:
ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ತಾಲೂಕಾ ಸ್ವಸಮಾಜದ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಲ್ಲಿನ ಶ್ರೀ ಶಾಂತೇರಿ ಕಾಮಾಕ್ಷಿ ದೇವಸ್ಥಾನದ ಸಭಾಗೃಹದಲ್ಲಿ ಜರುಗಿತು.
ಸಂಪನ್ಮೂಲ ವ್ಯಕ್ತಿಗಳಾದ ರಾಷ್ಟ್ರೀಯ ಮಟ್ಟದ ಮೆಮೊರಿ ಟ್ರೇನರ್ ಯಲ್ಲಾಪುರದ ಯೊಗೇಶ ಶಾನಭಾಗ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ತೇರ್ಗಡೆಗೊಂಡ 22 ವಿದ್ಯಾರ್ಥಿಗಳಿಗೆ ಪುರಸ್ಕರಿ ಮಾತನಾಡುತ್ತಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸ್ಕಾಲರಶಿಪ್, ಶಿಕ್ಷಣ ಸಾಲದ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಅಪರಿಮಿತ ಜ್ಞಾಪಕ ಶಕ್ತಿಯ ಪ್ರಾತ್ಯಕ್ಷಿಕೆಯನ್ನು ನಡಿಸಿದ ಯೊಗೇಶ ಶಾನಭಾಗ ಎಲ್ಲರ ಪ್ರಶಂಸೆಗೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ಅಧ್ಯಕ್ಷ ಕಿರಣ ಶಾನಭಾಗ ಪ್ರಮುಖರಾದ ಸುಬ್ರಾಯ ಕಾಮತ, ಮಂಜುನಾಥ ಪ್ರಭು, ನರೇಂದ್ರ ನಾಯಕ, ನೀತಾ ಕಾಮತ, ಮುಂತಾದವರು ಉಪಸ್ಥಿತರಿದ್ದರು. ಉಪಾಧ್ಯಕ್ಷ ಅನಿಲ ಪೈ ಸ್ವಾಗತಿಸಿದರು, ಶ್ರೀನಾಥ ಪೈ ಹಾಗೂ ನಾಗೇಶ ಪ್ರಭು ನಿರೂಪಿಸಿದರು, ಪ್ರವೀಣ ನಾಯಕ ವಂದಿಸಿದರು.
Leave a Comment