ಕಾರವಾರ: ಕಳೆದ ನಾಲ್ಕು ವರ್ಷದ ಅವದಿಯಲ್ಲಿ ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ ಶಾಸಕ ಸತೀಶ್ ಸೈಲ್ ಹೇಳಿದರು.
ಮಂಗಳವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಅಭಿವೃದ್ದಿ ಕಾಮಗಾರಿಗಳಿಗಾಗಿ ಕೋಟಿಗಟ್ಟಲೆ ಹಣ ಬಿಡುಗಡೆಯಾಗಿದ್ದು ಭವಿಷ್ಯದಲ್ಲಿ ಕ್ಷೇತ್ರದ ಬೆಳವಣಿಗೆ ನಡೆಯಲಿದೆ ಎಂದು ಹೇಳಿದರು. ಒಂದು ವರ್ಷದ ಅವದಿಯಲ್ಲಿ ವಿವಿಧ ಇಲಾಖೆಗಳಿಂದ ಕ್ಷೇತ್ರಕ್ಕೆ 150 ಕೋಟಿ ಅನುದಾನ ಬಂದಿದೆ. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ 20 ಕೋಟಿ ರೂ ಬಂದಿದೆ. ಇದರಲ್ಲಿ 50 ಕಿ.ಮೀ. ರಸ್ತೆ ದುರಸ್ತಿ ಕಾರ್ಯ ಮಾಡಲಾಗುವುದು. 9 ಕಿರು ಸೇತುವೆ ಹಾಗೂ 2 ದೊಡ್ಡ ಸೇತುವೆ ನಿರ್ಮಾಣಕ್ಕೆ 85 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಉಳಗಾ – ಕೆರವಡಿ, ಗಂಗಾವಳಿ-ಮಂಜುಗುಣಿ ಸೇತುವೆ ನಿರ್ಮಾಣವನ್ನು ಮಾಡಲಾಗುವದು ಎಂದರು.
ಇನ್ನು ಹಾರವಾಡ, ಮುದುಗಾ, ತದಡಿ, ಬೇಲೇಕೇರಿ ಕೂಡು ರಸ್ತೆಗೆ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ, ವಾರ್ಡ್ ಹಾಗೂ ಗ್ರಾಮಗಳ ರಸ್ತೆ ಅಭಿವೃದ್ದಿ ಮಾಡಲಾಗುವದು ಎಂದರು. ಜಿಲ್ಲಾಸ್ಪತ್ರೆಯಲ್ಲಿ ಸದ್ಯ 400 ಹಾಸಿಗೆ ಸೌಲಭ್ಯ ಇದ್ದು, ಇದನ್ನು 700 ಹಾಸಿಗೆ ಸೌಲಭ್ಯ ಕಲ್ಪಿಸಿ ಮೇಲ್ದರ್ಜೆಗೆ ಏರಿಸಲಾಗುವದು. ಚಿತ್ತಾಕುಲದಲ್ಲಿ 11 ಎಕರೆ ವ್ಯಾಪ್ತಿಯಲ್ಲಿ ಕ್ರೀಡಾಂಗಣ ನಿರ್ಮಿಸಲಾಗುವದು
Leave a Comment