• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ

June 10, 2017 by Sachin Hegde Leave a Comment

ದಾಂಡೇಲಿ:

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ಪರಿಶಿಷ್ಠ ಜಾತಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ ಘಟಕ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ದಾಂಡೇಲಿ ನಗರದಿಂದ ಹಲವಾರು ಸರ್ಕಾರಿ ಸಿಬ್ಬಂದಿಗಳು, ಕೃಷಿಕರು, ಪ್ರವಾಸಿಗರು ಮುಂಡಗೋಡ ನಗರಕ್ಕೆ ಹೋಗುವುದು ಬರುವುದು ಮಾಡುತ್ತಾರೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿರುತ್ತದೆ. ಕಾರಣ ದಾಂಡೇಲಿ – ಮುಂಡಗೋಡ ವಾಯಾ ಹಳಿಯಾಳ – ಕಲಘಟಗಿ ಬಸ್ ವ್ಯವಸ್ಥೆ ಮಾಡಿ ಪ್ರಯಾಣಿಕರಿಗೆ ಅನುಕೂಲ ಮಾಡಿ ಕೊಡಬೇಕು. ದಾಂಡೇಲಿ ನಗರದಲ್ಲಿ ನಿಯಮಿತವಾಗಿ ಬೆಳಗ್ಗೆ ಶಾಲಾ ಸಮಯಕ್ಕೆ ಸಿಟಿ ಬಸ್ ಬಸ್ ನಿಲ್ದಾಣದಿಂದ ಗಣೇಶನಗರ ಮಾರ್ಗವಾಗಿ – ಅಂಬೇವಾಡಿ – ಗಾಂವಠಾಣ ನವಗ್ರಾಮ – ಕೆ.ಇ.ಬಿ – ಸುದರ್ಶನನಗರ ಮಾರ್ಗವಾಗಿ ಬಸ್ ಪ್ರಯಾಣಿಸುತ್ತದೆ. ಆದರೆ ಇದೇ ಬಸ್ ಸಾಯಂಕಾಲ 4 ಗಂಟೆಗೆ ಬಸ್ ನಿಲ್ದಾಣದಿಂದ ಗಣೇಶನಗರ – ಅಂಬೇವಾಡಿ – ಗಾವಠಾಣ – ನವಗ್ರಾಮ ಮಾರ್ಗವಾಗಿ ಸುದರ್ಶನಗರಕ್ಕೆ ಹೋಗದೇ ಬಸ್ ನಿಲ್ದಾಣಕ್ಕೆ ಹಿಂದಿರುತ್ತದೆ. ಬಸ್ ಸಾಯಂಕಾಲ ಶಾಲೆ ಬಿಡುವ ಮುಂಚೆಯೇ 4 ಗಂಟೆಗೆ ಬಿಡುವುದುರಿಂದ ಶಾಲಾ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತದೆ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಪ್ರೌಢ ಶಾಲೆಯ ಹೆಣ್ಣು ಮಕ್ಕಳು ಶಾಲೆಯಿಂದ ಅಷ್ಟು ದೂರ ನಡೆದು ಕೊಂಡು ಹೋಗುವುದು ಕಂಡು ಬಂದಿರುತ್ತದೆ. ಇದರಿಂದ ತುಂಬಾ ಅನಾನುಕೂಲತೆ ಆಗುತ್ತಿದೆ. ಕಾರಣ ತಕ್ಷಣ ಸಾಯಂಕಾಲ 4.40 ಕ್ಕೆ ಹೊಸ ಬಸ್ ನಿಲ್ದಾಣದಿಂದ – ಚೆನ್ನಮ್ಮ ವೃತ್ತ – ಜೆ.ವಿ.ಡಿ. – ಬಾಂಬುಗೇಟ್ – ಟಿ.ಆರ್.ಟಿ – ಸುದರ್ಶನನಗರ – ಅಂಬೇವಾಡಿ – ಗಣೇಶನಗರ – ಬಸ ನಿಲ್ದಾಣ ಕ್ಕೆ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಅಶೋಕ ಪಾಟೀಲ, ರವಿ ಕಾಮತ ಮುಂತಾದವರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News Tagged With: Dandeli, ಒತ್ತಾಯಿಸಿ, ಕೃಷಿಕರು, ಕೆ.ಎಸ್.ಆರ್.ಟಿ.ಸಿ, ಗಾಂವಠಾಣ, ಜಾತಿ, ದಾಂಡೇಲಿ, ನವಗ್ರಾಮ, ಪರಿಶಿಷ್ಠ, ಪ್ರವಾಸಿ, ಬಸ್, ಬೇಡಿಕೆ, ಮನವಿ, ವಿವಿಧ, ವ್ಯವಸ್ಥೆ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar