ದಾಂಡೇಲಿ:
ನಗರದ ಹಳೆ ದಾಂಡೇಲಿಯ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಿ. ವೈ. ತಳವಾರವರು ಬೆಂಗಳೂರಿನ ಜೈ ಹೋ ಭಾರತ್ ಪೌಂಡೇಶನ್ನವರು ಕೊಡ ಮಾಡುವ ‘ಸಮಾತಾ ಸಾರಥಿ ಡಾ. ಬಿ.ಆರ್. ಅಂಬೇಡ್ಕರ ಸದ್ಭಾವನಾ ಪ್ರಶಸ್ತಿ’ ಗೆ ಭಾಜನರಾಗಿದ್ದಾರೆ.
ಇತ್ತೀಚೆಗೆÉ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರಿಗೆ ಈ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಿಬಿಎಂಪಿಯ ಮಹಾಪೌರರಾದ ಪದ್ಮಾವತಿ, ವಿಧಾನ ಪರಿಷತ್ ಸದಸ್ಯೆ ಮೋಟಮ್ಮ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಪ್ರಮಿಳಾ ನೇಸರ್ಗಿ, ವಿಧಾನ ಪರಿಷತ್ ಸದಸ್ಯ ಎಚ್.ಎಂ. ರೇವಣ್ಣ, ಬೆಂಗಳುರು ನಗರ ಕಸಾಪ ಅಧ್ಯಕ್ಷ ಮಾಯಣ್ಣ, ಮಾಜಿ ಶಾಸಕ ನೆ.ಲ ನರೇಂದ್ರಬಾಬು, ಸಂಸ್ಥೆಯ ಅಧ್ಯಕ್ಷೆ ಎಂ. ಶಕುಂತಲಾ ಮುಂತಾದ ಗಣ್ಯರು ಉಪಸ್ಥಿತರಿದ್ದರು.
Leave a Comment