ಕಾರವಾರ:
ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಗೆ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು ಜನವಿಕಾಸ ಸೇವಾ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಮಲೇರಿಯಾ ಮಾಸಾಚರಣೆ ಆಯೋಜಿಸಲಾಯಿತು.
“ಒಳತಿಗಾಗಿ ಮಲೇರಿಯಾ ಕೊನೆಗೊಳಿಸಿ” ಎಂಬ ಘೋಷ ವಾಕ್ಯದೊಂದಿಗೆ ಜಾಥಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ನರ್ಸಿಂಗ್ ಕಾಲೇಜು ಮತ್ತು ಸರಕಾರಿ ಪದವಿ ಪೂರ್ವಕಾಲೇಜು ವಿದ್ಯಾಥಿಗಳು ಮಲೇರಿಯಾ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ಲೆಕಾರ್ಡ್ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ನಗರಸಭೆ ಉಪಾಧ್ಯಕ್ಷೆ ಲಿಲಾಭಾಯಿ ಠಾಣೆಕರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರಮೇಶ ರಾವ್, ಕಾರ್ಯಕ್ರಮಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಬಾಪೂಜಿ ಸ್ಕೂಲ್ ನರ್ಸಿಂಗ್, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಯ ಸದಸ್ಯರು ಮತ್ತಿತರರು ಭಾಗವಹಿಸಿದರು.
Leave a Comment