ಹೊನ್ನಾವರ :
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಜಗದೀಪ್ ಎನ್.ತೆಂಗೆರಿಯವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಜಿ.ಪರಮೇಶ್ವರವರು ಆದೇಶ ಹೊರಡಿಸಿದ್ದಾರೆ.
ಜಗದೀಪ್ ಎನ್.ತೆಂಗೇರಿಯವರು ತಕ್ಷಣ ಹೊನ್ನಾವರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ
ಕಾರ್ಯೋನ್ಮುಖರಾಗುವಂತೆ ಸೂಚಿಸಿ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಾ.ಪರಮೇಶ್ವರ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಜಗದೀಪ್ ಎನ್.ತೆಂಗೇರಿಯವರು ವಿದ್ಯಾರ್ಥಿ ಕಾಂಗ್ರೆಸ್, ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದರು.ಈ ಹಿಂದೆ ಹನ್ನೊಂದು ವರ್ಷಗಳ ಕಾಲ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಕಳೆದ ಆರು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಗದೀಪ್ ಎನ್.ತೆಂಗೇರಿಯವರು ಈ ನೇಮಕಾತಿಯ ಕುರಿತು ಹರ್ಷ ವ್ಯಕ್ತ ಪಡಿಸಿದ್ದು ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಇರುವಾಗ ಶಾಸಕಿ ಶಾರದಾ ಶೆಟ್ಟಿಯವರು ನನ್ನ ಮೇಲೆ ವಿಶ್ವಾಸವಿಟ್ಟು ಈ ಗುರುತರ ಜವಾಬ್ದಾರಿ ನೀಡಿರುವುದಕ್ಕೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದ್ದಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಪಕ್ಷದ ಕಾರ್ಯಕರ್ತರ ಮತ್ತು ಎಲ್ಲ ಸ್ತರದ ಮುಖಂಡರ ಸಹಕಾರದೊಂದಿಗೆ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ವಿಶ್ವಾಸವನ್ನು ಜಗದೀಪ್ ತೆಂಗೇರಿ ವ್ಯಕ್ತಪಡಿಸಿದ್ದಾರೆ.
Leave a Comment