ಹೊನ್ನಾವರ:
ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದ ಶ್ರೀ ರಾಘವೇಶ್ವರ ಭಾರತೀ ಸಂಸ್ಕøತ ಪಾಠಶಾಲೆಯಲ್ಲಿ ಜೂ.22 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಶಾಸಕ ಮಂಕಾಳ ವೈದ್ಯ ಕಾರ್ಯಕ್ರಮ ಉದ್ಘಾಟಿಸುವರು. ಚಲನ ಚಿತ್ರ ನಿರ್ಮಾಪಕ ಸುಬ್ರಾಯ ವಾಳ್ಕೆ ಅಧ್ಯಕ್ಷತೆ ವಹಿಸುವರು. ಯಕ್ಷ ಚೌಡೇಶ್ವರಿ ದೇವಾಲಯದ ಅರ್ಚಕ ಮಹಾದೇವ ಅಂಬಿಗ ಗೌರವ ಉಪಸ್ಥಿತಿ. ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಜಿ.ಯು.ಭಟ್ಟ್, ಟ್ರಸ್ಟ್ನ ಅಧ್ಯಕ್ಷ ರಾಮ ಎಸ್ ಗೌಡ, ಮಾಜಿ ಜಿ.ಪಂ ಸದಸ್ಯ ಕೃಷ್ಣ ಗೌಡ, ಬಿಇಒ ಜಿ.ಎಸ್.ಭಟ್ಟ, ಗ್ರಾ.ಪಂ ಸದಸ್ಯರುಗಳಾದ ಟಿ.ಎಸ್.ಹೆಗಡೆ, ಸುರೇಶ ಶೆಟ್ಟಿ, ಐ.ವಿ.ನಾಯ್ಕ ಇತರರು ಪಾಲ್ಗೊಳ್ಳುವರು.
Leave a Comment