ಕಾರವಾರ;
ಕಾಳಿನದಿ ಯೋಜನೆ 2ನೇ ಹಂತ ಕದ್ರಾ ಅಣೆಕಟ್ಟು ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವದರಿಂದ ವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು. ಹೀಗಾಗಿ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕು ಎಂದು ಕೆಪಿಸಿ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕದ್ರಾ ಜಲಾಶಯದ ಗರಿಷ್ಟ ಮಟ್ಟವು 34.50 ಮೀಟರಗಳಾಗಿದ್ದು, ಇಂದಿನ ಜಲಾಯನ ಮಟ್ಟ 31.20 ಮೀಟರಗಳಿರುತ್ತದೆ. ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರಿದರೆ ಕಡಿಮೆ ಜಲಸಂಗ್ರಹಣ ಸಾಮರ್ಥವುಳ್ಳ ಕದ್ರಾ ಜಲಾಶಯವು ಗರಿಷ್ಟ ಮಟ್ಟವನ್ನು ಶೀಘ್ರವೇ ತಲುಪುವ ಸಾದ್ಯತೆ ಇದೆ. ಆದ್ದರಿಂದ ಅಣೆಕಟ್ಟು ಸುರಕ್ಷಾ ದೃಷ್ಟಿಯಿಂದ ಹೆಚ್ಚುಅಣೆಕಟ್ಟು ಕೆಳದಂಡೆಯಲ್ಲಿ ಹಾಗೂ ನದಿಯ ದಂಡೆಯ ಪಾತ್ರದಲ್ಲಿ ವಾಸಿಸುತ್ತಿರುವವರು ಸ್ಥಳಾಂತರವಾಗುವದು ಸೂಕ್ತ ಎಂದು ಹೇಳಲಾಗಿದೆ. ಕದ್ರಾ ಅಣೆಕಟ್ಟೆಯ ಕೆಳಭಾಗದ ನದಿಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲದ ಅವಧಿಯಲ್ಲಿ ನಡೆಸದಂತೆ ಕೋರಲಾಗಿದೆ.
Leave a Comment