ಕಾರವಾರ:
ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ನೂತನವಾಗಿ ಪಕ್ಷ ಸೇರ್ಫಡೆಗೊಂಡ ವಿವಿಧ ಮುಖಂಡರನ್ನು ಬರಮಾಡಿಕೊಂಡು ಅವರು ಮಾತನಾಡಿದರು.ಯಾವದೇ ಸಮಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.
ರಾಜ್ಯದಲ್ಲಿ ಅವದಿಗೂ ಮುನ್ನ ಚುನಾವಣೆ ಬರಲಿದೆ. ಅದನ್ನು ಎದುರಿಸಲು ಬಿಜೆಪಿ ಸಿದ್ದವಾಗಿದ್ದು, ಸೈದ್ದಾಂತಿಕ ನೆಲೆಗಟ್ಟಿನ ಆಧಾರದಲ್ಲಿ ಈ ಬಾರಿ ಗೆಲುವು ಸಿಗಲಿದೆ ಎಂದು ಅವರು ಹೇಳಿದರು. ಆರ್ಥಿಕವಾಗಿ ಹಿಂದುಳಿದ ಮಹಾರಾಷ್ಟ್ರ ಸರ್ಕಾರ 1.5ಲಕ್ಷ ಹಾಗೂ ಮಹಾರಾಷ್ಟ್ರ ಸರ್ಕಾರ 1ಲಕ್ಷ ರೂ ಸಾಲಮನ್ನಾ ಮಾಡಿದೆ. ಆದರೆ, ಕರ್ನಾಟಕ ಸರ್ಕಾರ 50 ಸಾವಿರ ಸಾಲಮನ್ನಾ ಘೋಷಿಸಿ ರೈತರ ಕಣ್ಣೋರೆಸುವ ನಾಟಕ ಮಾಡುತ್ತಿದೆ ಎಂದು ಆರೋಪಿಸಿದರು. ಜನಾಭಿಪ್ರಾಯದೊಂದಿಗೆ ಬಿಜೆಪಿ ಹೋರಾಟ ನಡೆಸಿದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಲಮನ್ನಾ ಘೋಷಿಸಿದರೇ ವಿನ: ಇದು ಅವರ ಸರ್ಕಾರದ ಸಾಧನೆಯಲ್ಲ ಎಂದು ಹೇಳಿದರು
ಕಾರವಾರ ವಿಧಾನ ಸಭಾ ಕ್ಷೇತ್ರ ನಿರೀಕ್ಷೆಯಂತೆ ಅಭಿವೃದ್ದಿಯಾಗಿಲ್ಲ. ಶಾಸಕ ಸಚಿವರಿಂದ ಗುದ್ದಲಿಪೂಜೆ ನಡೆಯುತ್ತಿದೆ ಬಿಟ್ಟರೆ, ಕಾಮಗಾರಿಗಳು ಶುರುವಾಗುತ್ತಿಲ್ಲ. ಕಾಂಗ್ರೆಸ್ ಆಡಳಿತ ನೋಡಿದ ಜನ ಅದರಿಂದ ನೊಂದು ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದರು. ಅಭ್ಯರ್ಥಿ ಯಾರೇ ಆಗಿದ್ದರೂ ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ವಿವಿಧ ಭಾಗ್ಯಗಳನ್ನು ಜಾರಿಗೆ ತಂದಿರುವ ಕಾಂಗ್ರೆಸ್ ಸರ್ಕಾರ ಜನರನ್ನು ನೆಮ್ಮದಿಯಾಗಿ ಬದುಕಲು ಬಿಡಲಿಲ್ಲ. ಜನರ ತೆರಿಗೆ ಹಣವನ್ನು ಲೂಟಿ ಮಾಡಿದೆಯಲ್ಲದೇ ಬಹುಸಂಖ್ಯಾತರ ವಿಶ್ವಾಸವನ್ನು ಕಾಂಗ್ರೆಸ್ ಕಳೆದುಕೊಂಡಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ತನ್ನ ಯೋಜನೆ ಎಂದು ಇಲ್ಲಿನ ಸರ್ಕಾರ ಬಿಂಬಿಸಿಕೊಳ್ಳುತ್ತಿದ್ದು, ಜನರ ದಾರಿ ತಪ್ಪಿಸುತ್ತಿದೆ ಎಂದು ದೂರಿದರು.
Leave a Comment