ಕಾರವಾರ:
ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಮಾದಕ ವಸ್ತು ಸೇವನೆಯಿಂದ ಆರೋಗ್ಯ ಹಾಳಾಗುವುದರೊಂದಿಗೆ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಹೀಗಾಗಿ ಮಾದಕ ವಸ್ತುಗಳಿಗೆ ದಾಸರಾಗದೇ ಸಮಾಜದ ಮುಖ್ಯ ವಾಹಿನಿಗೆ ಬಂದು ಗೌರವಯುತ ಬಾಳ್ವೆ ನಡೆಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಶಿವಾನಂದ ನಾಯಕ ಮಾತನಾಡಿ, ಕ್ಷಣಿಕ ಸುಖಕ್ಕಾಗಿ ಮಾದಕ ವಸ್ತುಗಳ ದಾಸರಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಹೇಳಿದರು. ಡಾ. ಗಿರೀಶ ಭೂತೆ, ಪ್ರಧಾನ ವೀಕ್ಷಕ ಗುರುರಾಜ ಹುಯಿಲಗೋಳ ಮಾತನಾಡಿದರು. ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಮಹೇಶ ಸಿ. ಶಾನಭಾಗ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ರಾಘವೇಂದ್ರ ಶಾನಭಾಗ ಸ್ವಾಗತಿಸಿ, ವಂದಿಸಿದರು.
Leave a Comment