• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ

June 29, 2017 by Sachin Hegde Leave a Comment

ದಾಂಡೇಲಿ:

1975 ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿದ್ದ ಬಿಜೆಪಿಯ ನಗರದ ಹಿರಿಯ ಕಾರ್ಯಕರ್ತ ಜೀವನಸಾ ಮಿಸ್ಕಿನ್ ಇವರನ್ನು ನಗರದ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಸ್ಥಳೀಯ ಶಂಕರ ಮಠದಲ್ಲಿ ಗುರುವಾರ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡ ರಾಧಾಕೃಷ್ಣ ಹೆಗಡೆಯವರು ತುರ್ತು ಪರಿಸ್ಥಿತಿ ಘೋಷಣೆ ಈ ದೇಶದ ಬಹುದೊಡ್ಡ ದುರಂತಗಳಲ್ಲಿ ಒಂದಾಗಿದ್ದು, ಆ ಸಂದರ್ಭದಲ್ಲಿ ದೇಶದ ಲಕ್ಷಾಂತರ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಬಲವಂತವಾಗಿ ಜೈಲಿಗಟ್ಟಲಾಗಿತ್ತು. ಇಡೀ ರಾಷ್ಟ್ರದ ವ್ಯವಸ್ಥೆಯನ್ನು ಬುಡಮೇಲಾಗಿಸಿದ ಅಪಕೀರ್ತಿ ಅಂದಿನ ಪ್ರಧಾನಿ ಇಂದಿರಾಗಾಂಧಿ ಸರಕಾರದ್ದಾಗಿದ್ದು, ನಂತರದ ದಿನಗಳಲ್ಲಿ ನಡೆದ ಚುನಾವಣೆಗಳಲ್ಲಿ ಇದರ ಪರಿಣಾಮವನ್ನು ಕಾಂಗ್ರೆಸ್ ಹಂತ ಹಂತವಾಗಿ ಅನುಭವಿಸುವಂತಾಯಿತು. ಇಂದು ಗುಜರಾತಿನಲ್ಲಿ ನರೇಂದ್ರ ಮೋಧಿ ನೇತೃತ್ವದ ವಿದ್ಯಾರ್ಥಿ ಸಂಘಟನೆ ತುರ್ತು ಪರಿಸ್ಥಿತಿಯ ವಿರುದ್ದ ಸಂಪೂರ್ಣ ಹೋರಾಟವನ್ನು ಕೈಗೊಂಡಿತ್ತು. ಅಂದು ಅನ್ಯಾಯದ ವಿರುದ್ದ ಹೋರಾಟವನ್ನು ಕೈಗೊಂಡಿದ್ದ ನರೇಂದ್ರ ಮೋಧಿಯವರು ಇಂದು ದೇಶದ ಪ್ರಧಾನಿಯಾಗಿ ಇಡೀ ವಿಶ್ವದಲ್ಲಿ ಭಾರತಕ್ಕೆ ಶ್ರೇಯಸ್ಸನ್ನು ತಂದುಕೊಟ್ಟ ಹೆಮ್ಮೆಯ ಪ್ರಧಾನಿಯಾಗಿ ಬಿಂಬಿತರಾಗಿದ್ದಾರೆ ಎಂದು ರಾಧಾಕೃಷ್ಣ ಹೆಗಡೆ ಹೇಳಿದರು.

ತುರ್ತು ಪರಿಸ್ಥಿತಿ ಸಮಯದಲ್ಲಿ ಬಿಜೆಪಿಯ ನಾಯಕರಿಂದ ಹಿಡಿದು ಕಾರ್ಯಕರ್ತರು ಜೈಲು ವಾಸ ಅನುಭವಿಸಿರುವುದನ್ನು ಸ್ಮರಿಸಿಕೊಂಡ ಅವರು ಈ ಕಾರಣಕ್ಕಾಗಿಯೆ ಬಿಜೆಪಿ ಪಕ್ಷವು ಪ್ರತಿ ವರ್ಷ ಜೂನು 25 ರಂದು ಕರಾಳ ದಿನಾಚರಣೆಯನ್ನು ಹಮ್ಮಿಕೊಳ್ಳುತ್ತಿದೆ. ಈ ಸುಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ 19 ತಿಂಗಳ ಕಾಲ ಬೆಳಗಾವಿಯಲ್ಲಿ ಜೈಲುವಾಸ ಅನುಭವಿಸಿದ್ದ ಜೀವನಸಾ ಮಿಸ್ಕಿನ್ ಅವರನ್ನು ಬಿಜೆಪಿ ಎಸ್.ಸಿ ಮೋರ್ಚಾ ಸನ್ಮಾನಿಸುತ್ತಿರುವುದು ಹರ್ಷ ತಂದಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಎಂ.ಸಿ.ಹೆಗಡೆ, ರೋಶನ್ ನೇತ್ರಾವಳಿ, ಅಬ್ದುಲ್ ವಹಾಬ ಬನ್ಸಾರಿ, ರಫೀಕ ಹುದ್ದಾರ, ವಿಷ್ಣು ವಾಜ್ವೆ, ಚಿದಾನಂದ ಕಲಶೆಟ್ಟಿ, ಅನಂತ್ರಾಜ ನಾಯ್ಕ, ಪ್ರತಾಪ ಚಿಮ್ಮಕುಟ್ಟಿ, ಸಂಜಯ ಚೌವ್ಹಾನ್, ಅರ್ಜುನ ನಾಯ್ಕ, ಭೀಮಶಿ ಬಾದೋಳಿ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದ ಬಿಜೆಪಿ ಎಸ್.ಸಿ. ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಚಂದ್ರಕಾಂತ ಕ್ಷೀರಸಾಗರ ವಂದಿಸಿದರು. ಮಂಜುನಾಥ ಹರಿಜನ ಕಾರ್ಯಕ್ರಮ ನಿರೂಪಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News Tagged With: 19, 1975, ಅನುಭವಿಸಿದ್ದ, ಎಸ್.ಸಿ, ಕಾಲ, ತಿಂಗಳ, ತುರ್ತು, ದಾಂಡೇಲಿ, ಬಿಜೆಪಿ, ಬೆಳಗಾವಿ, ಮುಖಂಡ, ಮೋರ್ಚಾ, ರಲ್ಲಿ, ರಾಧಾಕೃಷ್ಣ, ವಾಸ, ಸನ್ಮಾನ, ಸೆರೆಮನೆ, ಹಿರಿಯ, ಹೆಗಡೆ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar