ಕಾರವಾರ:
ನಿಷೇದಿತ ನೋಟುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.ಕುಮಟಾ ಮೂಲದ ಅಬ್ದುಲ್ ರಷೀದ ಶೇಖ ಅಲಿಯಾರ (52) ಆರೋಪಿ. ಈತ ಬಾಂಡಿಶಟ್ಟಾ ಬಳಿಯ ಗ್ರಾಮದೇವಿ ದೇವಸ್ಥಾನದ ಬಳಿ ಕಾರಿನಲ್ಲಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಕಾರನ್ನು ಪರಿಶೀಲಿಸಿದರು. ಆಗ ನಿಷೇದಿತ ಹಣ ಕಂಡು ಬಂದಿದೆ. ಈ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಇದ್ದಿದ್ದರಿಂದ ತುರ್ತು ಕಾರ್ಯಾಚರಣೆ ನಡೆಸಿ ದಾಳಿ ನಡೆಸಲಾಗಿತ್ತು.ಬಂದಿತ ಆರೋಪಿಯಿಂದ 10 ಲಕ್ಷ ರೂ ಮುಖಬೆಲೆಯ 500ರ ನಿಷೇದಿತ ಹಣದ ಜೊತೆ ಕಾರೊಂದನ್ನು ವಶಕ್ಕೆ ಪಡೆಯಲಾಗಿದೆ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಿಚಾರಣೆಗೊಳಪಡಿಸಿ ಇನ್ನಷ್ಟು ಮಾಹಿತಿ ಪಡೆಯಲಾಗುತ್ತಿದೆ.
Leave a Comment