ದಾಂಡೇಲಿ:
ಪರಿಸರ ಎಂದರೆ ಕೇವಲ ಕಾಡು, ಮರ, ನೀರು, ಗಾಳಿಯಲ್ಲ. ನಾವು ನಮ್ಮ ಹೆತ್ತ ತಾಯಿಯನ್ನು ಕಾಳಜಿಯಿಂದ ಗೌರವಾದರಗಳಿಂದ ನೋಡಿಕೊಳ್ಳುವಂತೆ ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದು ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನ್ ನುಡಿದರು.
ಅವರು ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ನೇತೃತ್ವಲ್ಲಿ, ದಾಂಡೇಲಿ ಶಿಕ್ಷಣ ಸಂಸ್ಥೆಯ ಸಹಕಾರದಲ್ಲಿ, ರಂಗನಾಥ ಸಭಾಂಗಣದಲ್ಲಿ ಶನಿವಾರ ನಡೆದ ಪರಿಸರ ದಿನಾಚರಣೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇಂದು ಪರಿಸರದ ಮಹತ್ವದ ಬಗ್ಗೆ ವಿದ್ಯಾರ್ಥಿ, ಯುವಜನರು ಹೆಚ್ಚಾಗಿ ತಿಳಿದುಕೊಳ್ಳಬೇಕಿದೆ ಎಂದರು.
ಮುಖ್ಯ ಅತಿಥಿಗಳಾಗಿದ್ದ ಹಳಿಯಾಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಎಸ್. ರಮೇಶ ಮಾತನಾಡಿ ಪರಿಸರÀ ಇದು ನಮ್ಮ ಬದುಕಿನ ಒಂದು ಭಾಗ. ಮನುಷ್ಯನ ಅತಿಯಾದ ಆಸೆಯಿಂದಾಗಿ ಇಂದು ಪರಿಸರ ನಾಶವಾಗುತ್ತಿದೆ. ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಾಗಿದ್ದು, ಅದಕ್ಕಾಗಿಯೇ ವೀಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತದೆ. ಈ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೇ ನಿತ್ಯದ ಪರಿಸರ ಕಾಳಜಿಯ ಕಾರ್ಯಕ್ರಮವಾಗಬೇಕು ಎಂದರು.
ಮುಖ್ಯ ಅತಿಥಿಗಳಾಗಿದ್ದ ಡಿ.ವೈ.ಎಸ್.ಪಿ ದಯಾನಂದ ಪವಾರ ಮಾತನಾಡಿ ನಮ್ಮ ಸುತ್ತಲಿನ ಪರಿಸರ ಸರಿಯಾಗಿದ್ದರೆ ನಮ್ಮ ಆರೋಗ್ಯವೂ ಸರಿಯಾಗಿರುತ್ತದೆ. ಪರಿಸರ ರಕ್ಷಣೆ ಇದು ಕೇವಲ ಇಲಾಖೆಯ ಜವಾಬ್ದಾರಿಯಷ್ಟೇ ಅಲ್ಲ. ಪ್ರತಿಯೊಬ್ಬ ಮನುಷ್ಯನ ಕರ್ತವ್ಯ ಕೂಡಾ. ಶುದ್ದ ಪರಿಸರವಿಲ್ಲದೇ ಮನುಷ್ಯ ಹೆಚ್ಚು ಕಾಲ ಬದುಕಲಾರ ಎಂದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಕಂಪನಿಯ ನೌಕರರಿಗೆ ಹಮ್ಮಿಕೊಂಡಿದ್ದ ವಿವಿಧ ಸ್ಪರ್ದಾ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಅಕ್ಷತಾ ಹಾಗೂ ಮಹಾದೇವಿ ನಿರೂಪಿಸಿದರು. ಎಸ್.ಸಿ. ಜೆನಾ ವಂದಿಸಿದರು. ಸಾರ್ವಜನಿಕ ಸಂಪರ್ಕಾದಿಕಾರಿ ಕೆ.ಜಿ. ಗಿರಿರಾಜ, ರಾಜೇಶ ತಿವಾರಿ, ಮುರಳೀಧರ ನಾಯ್ಕ ಮುಂತಾದವರು ಸಹಕರಿಸಿದರು
Leave a Comment