ದಾಂಡೇಲಿ :
ದಾಂಡೇಲಿ ಪ್ರೆಸ್ ಕ್ಲಬ್ ಆಶ್ರಯದಲ್ಲಿ ಇಂದು (ಜುಲೈ:08 ರಂದು) ನಗರದ ಕಾಗದ ಕಾರ್ಖಾನೆಯ ಡಿಲಕ್ಸ್ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಸಂಕಲ್ಪ ಸಂಸ್ಥೆಯ ಅಧ್ಯಕ್ಷರು ಹಾಗೂ ಚಿಂತಕರಾಗಿರುವ ಪ್ರಮೋದ ಹೆಗಡೆ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳುಂಕೆ, ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಜಿ.ಗಿರಿರಾಜ ಅವರುಗಳು ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ದಾಂಡೇಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಗುರುಶಾಂತ ಜಡೆಹಿರೇಮಠ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ನಗರದ ಹಿರಿಯ ಸಮಾಜ ಸೇವಕ ಟಿ.ಆರ್.ಚಂದ್ರಶೇಖರ, ಹಿರಿಯ ಪತ್ರಕರ್ತ ಕೃಷ್ಣಾ.ಜಿ.ಪಾಟೀಲ ಹಾಗೂ ವಿಜಯ ಸಂದೇಶ ಪತ್ರಿಕೆಯ ಸಂಪಾದಕಿ ಸುಮಂಗಲಾ.ಸಿ.ಅಂಗಡಿ ಅವರುಗಳಿಗೆ ಗೌರವ ಸನ್ಮಾನ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದಾಂಡೇಲಿ ಪ್ರೆಸ್ ಕ್ಲಬ್ ಪ್ರಕಟಣೆಯಲ್ಲಿ ತಿಳಿಸಿದೆ.
Leave a Comment