• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಾಸಾಶನ ವಿತರಣೆ

July 19, 2017 by Sachin Hegde Leave a Comment

ಕಾರವಾರ:

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಕಳೆದ 12 ವರ್ಷಗಳಿಂದ ಬಡವರಿಗೆ, ನಿರ್ಗತಿಕರಿಗೆ ಮಾಸಾಶನ ನೀಡುತಿದ್ದು, ಈ ಬಾರಿ ಜಿಲ್ಲೆಯ 269 ಜನರು ಈ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.ಗುರು ಭವನದಲ್ಲಿ ಮಂಗಳವಾರ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಜಿಲ್ಲಾಮಟ್ಟದ ಮಾಸಾಶನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಬಡ ಜನರ ಏಳಿಗೆಗಾಗಿ ಶ್ರಮಿಸುತ್ತಿರುವ ಯೋಜನೆಯು ಆಯಾ ಭಾಗದಲ್ಲಿ ದೀರ್ಘಕಾಲದ ಅನಾರೋಗ್ಯಕ್ಕೊಳಗಾದವರು, ಅಂಗವಿಕಲರು, ಬಡವರು ಸೇರಿದಂತೆ ಇನ್ನಿತರರಿಗೆ ಸ್ವಾವಲಂಬಿಯಾಗಿ ಬದುಕಲು ಸಹಕಾರ ನೀಡಲಾಗುತ್ತಿದೆ ಎಂದು ಹೇಳಿದರು.ಉತ್ತರಕನ್ನಡ ಜಿಲ್ಲೆಯ 2016 ಏಪ್ರಿಲ್ ನಿಂದ 2017 ಮಾರ್ಚ್ ರವರೆಗೆ ಒಟ್ಟು 269 ಫಲಾನುಭವಿಗಳಿಗೆ 16 ಲಕ್ಷದ 34 ಸಾವಿರ ಮಾಸಾಶನ ವಿತರಿಸಲಾಗಿದೆ. ಅದರಲ್ಲಿ ಕುಮಟಾದ 27, ಹೊನ್ನಾವರ 69, ಕಾರವಾರ 34, ಶಿರಸಿ 68, ಯಲ್ಲಾಪುರ 37, ದಾಂಡೇಲಿಯ 34 ಫಲಾನುಭವಿಗಳು ಆಯ್ಕೆಯಾಗಿದ್ದಾರೆ.ಜಿಲ್ಲಾ ನಿರ್ದೇಶಕ ಲಕ್ಷ್ಮಣ ಎಂ. ಮಾತನಾಡಿ, ಬಡವರಿಗೆ ಹೆಚ್ಚು ಅವಶ್ಯವಿರುವ ಮಾಸಾಶನವನ್ನು ಸಂಘವು ಪ್ರತಿ ವರ್ಷವೂ ನೀಡುತ್ತಿದೆ. ಇದನ್ನು ಮಹಿಳೇಯರು ತಮ್ಮ ವೈದ್ಯಕೀಯ ಖರ್ಚಿಗಾಗಿ, ಕುಟುಂಬದ ನಿರ್ವಹಣೆಗಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬೇರೆ ಬೇರೆ ಖಾಯಿಲೆಗಳಿಂದ, ಅಪಘಾತದಿಂದ ಪತಿ, ಮಕ್ಕಳನ್ನು ಕಳೆದುಕೊಂಡವರಿಗೆ, ಅಂಗವಿಕಲರಾದವರಿಗೆ ಪ್ರತಿ ತಿಂಗಳು ರೂ. 750 ರಿಂದ ರೂ. 1,000ದವರೆಗೆ ಮಾಸಾಶನ ನೀಡುತ್ತಿದ್ದೇವೆ. ಆಯಾ ಕುಟುಂಬದ ಪರಿಸ್ಥಿತಿಯನನು ಅಧ್ಯಯನ ಮಾಡಿ ಅದನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೃಷಿ, ಶಿಕ್ಷಣ, ಸ್ವಚ್ಛತೆ ಸೇರಿದಂತೆ ಇನ್ನಿತರ ಕಾರ್ಯಗಳಿಂದ ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಪರಿವರ್ತನೆಗಳಾಗಿವೆ. ಗ್ರಾಮೀಣ ಪ್ರದೇಶದ ಜನರಿಗೆ ಅವಶ್ಯವಿರುವ ಸ್ವ ಉದ್ಯೋಗ ತರಬೇತಿ, ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ, ಕೃಷಿ ಯಂತ್ರೋಪಕರಣಗಳ ವಿತರಣೆ, ಜನಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಮೂಲಕ ನೆರವು ನೀಡಲಾಗುತ್ತಿದೆ ಎಂದರು. ಯೋಜನಾಧಿಕಾರಿ ಶೇಖರ ನಾಯ್ಕ ಇತರರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News Tagged With: 12 ವರ್ಷ, ಅಜ್ರಿ, ಕಾರವಾರ 34, ಕಾರ್ಯಕ್ರಮ, ಕುಮಟಾದ 27, ಗ್ರಾಮಾಭಿವೃದ್ಧಿ, ಜಿಲ್ಲಾ, ದಾಂಡೇಲಿಯ 34, ಧರ್ಮಸ್ಥಳ, ಬಡವರಿಗೆ, ಮಟ್ಟ, ಮಾಸಾಶನ, ಯಲ್ಲಾಪುರ 37, ವಿತರಣಾ, ವಿತರಣೆ, ಶಿರಸಿ 68, ಸಂಸ್ಥೆ, ಹೊನ್ನಾವರ 69

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar