ಕಾರವಾರ:
ವಿದ್ಯುತ್ ಕಂಬ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಲೈನ್ಮೆನ್ ಒಬ್ಬ ಆಕಸ್ಮಿಕ ವಿದ್ಯುತ್ ಪ್ರವಹಿಸಿ ನೆಲಕ್ಕೆ ಬಿದ್ದು ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಸರಕಾರಿ ಪದವಿ ಪೂರ್ವ ಕಾಲೇಜಿನ ಎದುರು ಇರುವ ವಿದ್ಯುತ್ ಕಂಭದ ಮೇಲೆ ಲೈನ್ಮನ್ ಶಿವಲಿಂಗಯ್ಯ ದುರಸ್ಥಿ ಕಾರ್ಯ ನಡೆಸಿದ್ದರು. ಈ ವೇಳೆ ಆಕಸ್ಮಿಕವಾಗಿ ತಂತಿಗೆ ಕೈ ತಗುಲಿ ಕೆಳಗೆ ಉರುಳಿ ಬಿದ್ದಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
Leave a Comment