ಕಾರವಾರ:
ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಸಾವು ನೋವುಗಳು ಸಂಭವಿಸಿದೆ. ಮಂಗಳವಾರ ಬಿಣಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಹದಗೆಟ್ಟಿತ್ತು. ಬುಧವಾರ ಸಂಜೆ ನಗರದಲ್ಲಿ ತೆರೆದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ನಡೆದಿದೆ. ಭಾರೀ ಮಳೆ ಇದ್ದ ಕಾರಣ ಈ ಪ್ರಕರಣ ಮರುದಿನ ಬೆಳಕಿಗೆ ಬಂದಿದೆ. ಗುರುವಾರ ಕಾರವಾರದ ಸಿದ್ದರ ಅಜಗೇರಿ ಎಂಬ ಹಳ್ಳದಲ್ಲಿ ಆನಂದ ನಾಯ್ಕ ಎಂಬಾತರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಇನ್ನು ಮಂಜು ಮುಸುಕಿದ ಕಾರಣ ಶಾಲಾ ವಾಹನವೊಂದು ಮುದಗಾ ಬಳಿ ಧರಗಪ್ಪಳಿಸಿದೆ. ಅದೃಷ್ಠವಶಾತ್ ಮಕ್ಕಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಡಲು ತೀರ ಪ್ರದೇಶವಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ಮಳೆ ರಭಸಗೊಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈವರೆಗೆ ಅಂದಿಗಿಂತ ಹೆಚ್ಚು ಮಳೆ ಸುರಿದಿದ್ದು, ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗಿದೆ. ಮಳೆಯಿಂದಾಗಿ ಅಲ್ಲಲ್ಲಿ ಜೀವ ಹಾನಿ ಕೂಡ ಸಂಭವಿಸಿದೆ. ರಸ್ತೆಗಳ ಮೇಲೆ ಮರ ಬೀಳುವದು ಸಾಮಾನ್ಯವಾಗಿದ್ದರಿಂದ ಹೆದ್ದಾರಿಗಳಲ್ಲಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಮಲೆನಾಡು ಭಾಗದಲ್ಲಿ ಮಳೆ ಚುರುಕಾಗಿದ್ದು, ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು ಅಪ್ಪಳಿಸಿ ಹಾನಿ ಉಂಟು ಮಾಡುತ್ತಿವೆ. ಕೆಲ ಮನೆಗಳಲ್ಲಿ ವಿದ್ಯುತ್ ಉಪಕರಣಗಳು ಹಾಳಾಗಿವೆ.
Leave a Comment