ಹಳಿಯಾಳ :
ಅರಣ್ಯವನ್ನು ನಂಬಿಕೊಂಡು ಕಾನನದ ಮಧ್ಯೆ ಜೀವನ ನಿರ್ವಹಣೆ ಮಾಡುತ್ತಿರುವ ಬುಡಕಟ್ಟು ಸಿದ್ದಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಕಾಂಗ್ರೇಸ್ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದರ ಸದುಪಯೋಗ ಈ ಸಮುದಾಯದವರು ಪಡೆಯಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು.
ಪಟ್ಟಣದ ಮರಾಠಾ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸಿದ್ದಿ ಜನಾಂಗದವರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಪೌಷ್ಠಿಕ ಆಹಾರ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಸಚಿವರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವಂತರನ್ನಾಗಿ ಮಾಡಬೇಕು ಎಂದು ಕರೆ ನೀಡಿದ ಅವರು ಸಿದ್ದಿ ಜನಾಂಗ ಕ್ರೀಡೆ, ಶಿಕ್ಷಣ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು ಸರ್ಕಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳ ಮೂಲಕ ಪ್ರೋತ್ಸಾಹನ ನೀಡುತ್ತಿದ್ದು ಅದರ ಲಾಭ ಪಡೆಯುವಂತೆಯೂ ಸಚಿವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಘೊಟ್ನೇಕರ, ಬುಡಕಟ್ಟು ಸಿದ್ದಿ ಜನಾಂಗದ ಮುಖಂಡ ದಿಯೋಗ ಸಿದ್ದಿ, ಪುರಸಭೆ ಅಧ್ಯಕ್ಷ ಉಮೇಶ ಬೊಳಶೆಟ್ಟಿ, ತಾಪಂ ಅಧ್ಯಕ್ಷೆ ರೀಟಾ ಸಿದ್ದಿ, ಇಮಾಮಹುಸೇನ ಸಿದ್ದಿ ಮಾತನಾಡಿದರು.
ಈ ಸಂದರ್ಭದಲ್ಲಿ ಹೆಸ್ಕಾಂ ಇಲಾಖೆಯಿಂದ ಸಿದ್ದಿ ಜನಾಂಗದ 60 ಫಲಾನುಭವಿಗಳಿಗೆ ತಲಾ 1328 ರೂ. ಬೆಲೆಯ ಸೋಲಾರ ಲ್ಯಾಂಪ್ ಹಾಗೂ 1450 ಕುಟುಂಬಗಳಿಗೆ ಪೌಷ್ಠಿಕ ಆಹಾರ ಸಾಮಗ್ರಿಗಳನ್ನು ಸಚಿವರು ವಿತರಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷ ಸಂತೋಷ ರೆಣಕೆ, ಸದಸ್ಯ ಕೃಷ್ಣಾ ಪಾಟೀಲ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ, ತಾಪಂ ಉಪಾಧ್ಯಕ್ಷೆ ನೀಲವ್ವಾ ಮಡಿವಾಳ, ಸದಸ್ಯರಾದ ದೇಮಾಣಿ ಶಿರೋಜಿ, ಮೋಹನ ನಾಕಾಡಿ, ಸಿದ್ದಿ ಮುಖಂಡ ಯಾಕುಬನಾಯಕ ಸಿದ್ದಿ, ತಾಪಂ ಕಾನಿ ಅಧಿಕಾರಿ ಲಕ್ಷ್ಮಣರಾವ ಯಕ್ಕುಂಡಿ, ತಹಶೀಲ್ದಾರ್ ವಿದ್ಯಾಧರ ಗುಳಗುಳಿ, ಹೆಸ್ಕಾಂ ಅಧಿಕಾರಿ ರವೀಂದ್ರ ಮೆಟಗುಡ್ಡ, ಜಿಪಂ ಅಧಿಕಾರಿ ಉದಯ ಛಬ್ಬಿ, ಬಿಇಓ ಸಿಎಸ್ ನಾಯ್ಕ , ಕೃಷಿ ಅಧಿಕಾರಿ ನಾಗೇಶ ನಾಯ್ಕ, ಸಮಾಜ ಕಲ್ಯಾಣ ಅಧಿಕಾರಿ ನವೀನ ಕಟ್ಟಿ, ದರ್ಶನ ನಾಯ್ಕ ಇದ್ದರು.
Leave a Comment