• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ

July 27, 2017 by Gaju Gokarna Leave a Comment

ಹೊನ್ನಾವರ:

ಕೇರಳ ರಾಜ್ಯದಿಂದ ಗೋವಾ ಬಾರ್ಡ್‍ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ ಹೇಳಿದರು.
ಪಟ್ಟಣದ ಶರಾವತಿ ಕಲಾ ಮಂದಿರದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ನಡೆದ `ಸುಧಾರಿತ ಬೀಟ್ ವ್ಯವಸ್ಥೆ’ ಸಿಟಿಜನ್ ಕಮೀಟಿ ಮೀಟಿಂಗ್ ಮತ್ತು ಜನಸಂಪರ್ಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೀಟ್ ವ್ಯವಸ್ಥೆಯು ಪೊಲೀಸ್ ಕರ್ತವ್ಯಗಳಿಗೆ ಅಗತ್ಯವಾದ ಬುನಾದಿಯನ್ನು ಒದಗಿಸುವ ಬಹುಮುಖ್ಯ ವ್ಯವಸ್ಥೆಯಾಗಿದ್ದು, ಇದು ಪೊಲೀಸ್ ಇಲಾಖೆಯು ದಕ್ಷತೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯ. ಈ ವ್ಯವಸ್ಥೆಯ ಪರಿಷ್ಕøತಗೊಳಿಸಿ ಗಸ್ತು ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಕೆಲವು ಮಾರ್ಪಾಡುಗಳನ್ನು ಮತ್ತು ಸುಧಾರಣೆಗಳನ್ನು ಮಾಡುವ ಅಗತ್ಯತೆಯಿಂದ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಈ ವ್ಯವಸ್ಥೆಯಲ್ಲಿ ಎಲ್ಲಾ ಪೊಲೀಸರಿಗೂ ಬೀಟ್ ಕರ್ತವ್ಯಕ್ಕೆ ನೇಮಿಸಲಾಗಿದೆ. ಇದರಿಂದ ಅವರಲ್ಲಿರುವ ಸಾಮಥ್ರ್ಯ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕಾರ ನೀಡಿದರೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಸಾಧ್ಯ.
ಸಾರ್ವಜನಿಕರು ತಮ್ಮ ಪ್ರಾಣ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ತಮ್ಮ ಮೊಬೈಲ್ ಫೋನ್‍ಗಳಿಗೆ ಸಾವಿರಾರು ಮೌಲ್ಯದ ಗಾರ್ಡ್‍ಗಳನ್ನು ಅಳವಡಿಸಿಕೊಳ್ಳುವ ಬೈಕ್ ಸವಾರರು ತಮ್ಮ ರಕ್ಷಣೆಗೆ ಹೆಲ್ಮೆಟ್ ಧರಿಸದೇ ಅಲಕ್ಷ್ಯ ಮಾಡುತ್ತಿದ್ದಾರೆ. ಇದರಿಂದ ಅನೇಕ ಅವಘಡಗಳು ಸಂಭವಿಸುತ್ತವೆಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಪತ್ರಕರ್ತ ಜಿ.ಯು.ಭಟ್ಟ ಮಾತನಾಡಿ ಸಾರ್ವಜನಿಕರು ಪೊಲೀಸರೊಂದಿಗೆ ನಿರಂತರವಾಗಿ ಸಂಪರ್ಕ ಹೊಂದುವ ಉದ್ದೇಶದಿಂದ ಮತ್ತು ಸಮಾಜದಲ್ಲಿನ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಬೀಟ್ ವ್ಯವಸ್ಥೆ ಜಾರಿಗೆ ಬಂದಿದೆ. ಇದರಿಂದ ಸಾರ್ವಜನಿಕರಿಗೆ ತಮ್ಮ ಸುತ್ತಮುತ್ತಲಿನ ಸಮಾಜಘಾತುಕ ಶಕ್ತಿಯನ್ನು ಹತೋಟಿಗೆ ತರಲು ಇದು ಸಹಕಾರಿಯಾಗಿದೆ. ತಾಲೂಕಿನಲ್ಲಿ ಜಿಲ್ಲೆಗೆ ಇನ್ನುಳಿದ ಭಾಗಗಳಿಗೆ ಹೋಲಿಸಿದರೆ ಅಪರಾಧ ಪ್ರಕರಣಗಳು ತೀರಾ ವಿರಳವಾಗಿದೆ. ಇಲ್ಲಿಯ ಜನರು ಶಾಂತಿಪ್ರಿಯರಾಗಿದ್ದು, ಸಹಬಾಳ್ವೆಗೆ ಹೆಸರಾಗಿದ್ದಾರೆ ಎಂದರು.
ತುಳಸಿದಾಸ ಪಾವಸ್ಕರ್ ಮಾತನಾಡಿ ಪಟ್ಟಣದ ಪ್ರಮುಖ ಸರ್ಕಲ್‍ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದನ್ನು ಜಾರಿಗೊಳಿಸಬೇಕು. ಅಧಿಕೃತ ಪರವಾನಗಿ ಇಲ್ಲದ ಪಡ್ಡೆ ಹುಡುಗರು ಬೇಕಾ ಬಿಟ್ಟಿ ವಾಹನ ಚಾಲಾಯಿಸುತ್ತಿದ್ದಾರೆ. ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾಹನಗಳನ್ನು ಅಡ್ಡತಿಡ್ಡಿಯಾಗಿ ನಿಲ್ಲಿಸುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ವ್ಯತ್ಯಯ ಉಂಟಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವುದರ ಮೂಲಕ ಏಕಮುಖ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂದರು.
ಭಟ್ಕಳ ಡಿವೈಎಸ್‍ಪಿ ಪಿ.ಓ.ಶಿವಕುಮಾರ ಪ್ರಾಸ್ತಾವಿಕ ಮಾತನಾಡಿದರು. ಸಿಪಿಐ ಕುಮಾರಸ್ವಾಮಿ ಸ್ವಾಗತಿಸಿದರು. ಪಿಎಸ್‍ಐ ಆನಂದಮೂರ್ತಿ ವಂದಿಸಿದರು. ಪೊಲೀಸ್ ಕಾನ್ಸ್‍ಟೇಬಲ್ ಲೋಕೇಶ ಅರಿಶಿಣಗುಪ್ಪಿ ಗಸ್ತು ವ್ಯವಸ್ಥೆಯ ಕುರಿತು ಅನುಭವ ಹಂಚಿಕೊಂಡರು. ನಿವೃತ್ತ ಶಿಕ್ಷಕ ಎಸ್.ಜೆ.ಕೈರನ್ ಮಾತನಾಡಿದರು. ಪ್ರೊ. ಪ್ರಶಾಂತ ಮೂಡಲಮನೆ ಕಾರ್ಯಕ್ರಮ ನಿರ್ವಹಿಸಿದರು. ಕ್ರೈಂ ಪಿಎಸ್‍ಐ ಗಣೇಶ ಜೋಗಳೇಕರ್, ಮಂಕಿ ಪಿಎಸ್‍ಐ ಕೆ.ಎಸ್.ಸುಂಕದ್ ಉಪಸ್ಥಿತರಿದ್ದರು. ಬೀಟ್ ಸದಸ್ಯರಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News Tagged With: ಅಲಕ್ಷ್ಯ, ಇಲಾಖೆ, ಉತ್ತಮ, ಕಮೀಟಿ, ಕಲಾ, ಕೇರಳ, ಕ್ಯಾಮರಾ, ಗೋವಾ, ಜನಸಂಪರ್ಕ, ದಿಂದ, ನಡೆದ, ಪಡ್ಡೆ, ಪೊಲೀಸ್, ಫೋನ್‍, ಬಾಂಧವ್ಯ, ಬಾರ್ಡ್‍ರ್, ಬೇಕಾ ಬಿಟ್ಟಿ, ಮಂದಿರ, ಮೀಟಿಂಗ್, ಮೊಬೈಲ್, ರಾಜ್ಯ, ವತಿ, ವಾಹನ, ಶಕ್ತಿ, ಶರಾವತಿ, ಶಾಂತಿಪ್ರಿಯ, ಸಭೆ, ಸಮಾಜಘಾತುಕ, ಸಹಬಾಳ್ವೆಗೆ, ಸಿಸಿ, ಸುತ್ತಮುತ್ತಲಿನ, ಸುಧಾರಿತ ಬೀಟ್ ವ್ಯವಸ್ಥೆ' ಸಿಟಿಜನ್, ಹುಡುಗರು, ಹೆಲ್ಮೆಟ್, ಹೊನ್ನಾವರ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar