ಹೊನ್ನಾವರ :
ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ ಯಾವುದೇ ಪರಿಹಾರ ದೊರೆತಿಲ್ಲ. ಬಡಜನರು, ವಯೋವೃದ್ಧರು ಅವಲಂಬಿಸಿರುವ ಏಕೈಕ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲವ್ಯಾಧಿ, ಹರ್ನಿಯಾ, ತುರ್ತು ಚಿಕಿತ್ಸಾ ವೈದ್ಯರಿಲ್ಲ. ಹಲವು ಬಾರಿ ತಮ್ಮ ವೈದ್ಯಾಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಮನವಿ ತಲುಪಿದ 15 ದಿನಗಳೊಳಗಾಗಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸದಿದ್ದರೆ ಸಾರ್ವಜನಿಕರೊಡಗೂಡಿ ಅಗಸ್ಟ್ 9 ರಂದು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಆಟೋ ಚಾಲಕ ಮತ್ತು ಮಾಲಕರ ಸಂಘದ ಅಧ್ಯಕ್ಷ ಶಿವರಾಜ ಮೇಸ್ತ ಹಾಗೂ ಕರ್ನಾಟಕ ಕ್ರಾಂತಿರಂಗದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment