• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ

August 11, 2017 by Sachin Hegde Leave a Comment

ಹಳಿಯಾಳ:

ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ದಿನಗಳಂದು ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿರುವ ಹಿಂದೂ ಜನಜಾಗೃತಿ ಸಮಿತಿಯವರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಸಲ್ಲಿಸಿದರು.

ಇಲ್ಲಿಯ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಹಿಂ.ಜ. ಸಂಘಟನೆಯವರು ಪ್ಲಾಸ್ಟಿಕ ಧ್ವಜಗಳ ಮಾರಾಟಕ್ಕೆ ನಿರ್ಬಂಧ ಹೇರಬೇಕು, ರಾಷ್ಟ್ರಧ್ಬಜಗಳಿಗೆ ಆಗುವ ಅಪಚಾರ ತಡೆಯಬೇಕು ಎಂದು ಆಗ್ರಹಿಸಿ ಬರೆದ ಮನವಿ ಪತ್ರವನ್ನು ತಹಶೀಲ್ದಾರ್, ಪೋಲಿಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಶಾಲಾ ಕಾಲೇಜುಗಳಿಗೂ ಸಲ್ಲಿಸಿದರು.
ಮನವಿಯಲ್ಲಿ ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ದಿನಗಳನ್ನು ಅದ್ಧೂರಿಯಿಂದ ಆಚರಿಸಲು ಅತ್ಯುತ್ಸಾಹದಿಂದ ರಾಷ್ಟ್ರಾದ್ಯಂತ ಭರ್ಜರಿ ಸಿದ್ಧತೆಗಳು ನಡೆಯುತ್ತವೆ. ಇಂತಹ ರಾಷ್ಟ್ರೀಯ ದಿನಗಳನ್ನು ಆಚರಿಸುವಾಗ ಕಾಗದ ಮತ್ತು ಪ್ಲಾಸ್ಟಿಕ್‍ಗಳಿಂದ ತಯಾರಿಸುವ ಧ್ವಜಗಳ ಮೂಲಕ ರಾಷ್ಟ್ರದ ತ್ರಿವರ್ಣ ಧ್ವಜಕ್ಕೆ ಅಪಚಾರವಾಗುವುದನ್ನು ನಾಗರಿಕರು ತಡೆಯಬೇಕಿದೆ. ರಾಷ್ಟ್ರಧ್ವಜವನ್ನು ಅರಳಿಸುವ ಸಂದರ್ಭದಲ್ಲಿ ಮಕ್ಕಳಿಗೆ ವಿತರಿಸುವ ಕಾಗದದ ಮತ್ತು ಪ್ಲಾಸ್ಟಿಕ್ ಧ್ವಜಗಳು ಕಾರ್ಯಕ್ರಮದ ಬಳಿಕ ಹರಿದ ಸ್ಥಿತಿಯಲ್ಲಿ ಸಾರ್ವಜನಿಕ ರಸ್ತೆ, ಚರಂಡಿಗಳಲ್ಲಿ ಅನಾಥವಾಗಿ ಬಿದ್ದಿರುವುದನ್ನು ನೋಡಬೇಕಾಗಿರುವುದು ಅತ್ಯಂತ ಖೇದಕರವಾಗಿದ್ದು ಇದನ್ನು ತಡೆಯಬೇಕೆಂದು ಆಗ್ರಹಿಸಿದ್ದಾರೆ.
ರಾಷ್ಟ್ರಧ್ವಜಕ್ಕೆ ಗೌರವವನ್ನು ಕಾಪಾಡುವ ಬಗ್ಗೆ ಪರಿಣಾಮಕಾರಿ ಕ್ರಮವನ್ನು ಕೈಗೊಳ್ಳಬೇಕೆಂದು ಸಮಿತಿಯು ಸರಕಾರವನ್ನು ವಿನಂತಿಸುವುದರೊಂದಿಗೆ ರಾಷ್ಟ್ರಧ್ವಜದ ಅವಮಾನವನ್ನು ತಡೆಗಟ್ಟುವ ಈ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ನಾಗರಿಕರನ್ನು ಕೋರಲಾಗಿದೆ.
ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ತಾಲೂಕಾ ಸಮನ್ವಯಕ ವಿಠೋಬಾ ಮಾಳ್ಸೇಕರ, ಅಭಿ ಮಸೂರಕರ, ವಿನೋದ ಗಿಂಡೆ, ಪದ್ಮಾ ಧೂಳಿ, ಕಾಂಚನಾ ರಕಪೂತ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News Tagged With: ಅಪಚಾರ, ಆಗ್ರಹಿಸಿ, ಇಲಾಖೆ, ಕಾಂಚನಾ, ಕ್ರಮ, ಗಿಂಡೆ, ತಹಶೀಲ್ದಾರ್, ತ್ರಿವರ್ಣ, ದಂತೆ, ಧ್ವಜ, ಪದ್ಮಾ ಧೂಳಿ, ಪ್ಲಾಸ್ಟಿಕ್, ಮನವಿ, ಮಿನಿ, ಮುಂಜಾಗ್ರತಾ, ರಕಪೂತ, ರಾಷ್ಟ್ರಧ್ವಜಕ್ಕೆ, ವಹಿಸಬೇಕೆಂದು, ವಾಗ, ವಿಧಾನ, ಶಿಕ್ಷಣ, ಸೇರಿದಂತೆ, ಸೌಧ, ಹಳಿಯಾಳ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar