ಕಾರವಾರ: ಆಗಸ್ಟ 14 ರಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ಮತ್ತು ಶ್ರೀ ಕೃಷ್ಣ ಜಂiÀಂತಿ ಅಂಗವಾಗಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮನವಿ ಮಾಡಿದರು.
ನಾಡಪ್ರಭು ಕೆಂಪೇಗೌಡ ಮತ್ತು ಶ್ರೀ ಕೃಷ್ಣ ಜಯಂತಿ ಕುರಿತು ಬುಧವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಬೇಕು ಎಮದು ಅವರು ಹೇಳಿದರು. ಆಗಸ್ಟ 14 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಮತ್ತು ಶ್ರೀ ಕೃಷ್ಣ ಜಯಂತಿಯನ್ನು ಆಚರಿಸಲಾಗುವದು. ಈ ಸಂದರ್ಭದಲ್ಲಿ ವಿದ್ವಾಂಶರುಗಳಿಂದ ವಿಶೇಷ ಉಪನ್ಯಾಸಗಳು ಮತ್ತು ಇಸ್ಕಾನ್ ಮಂದಿರದ ಭಕ್ತರಿಂದ ಭಜನೆಗಳು ನಡೆಯಲಿವೆ. ಸಂಜೆ 5.30 ಗಂಟೆಗೆ ಜಿಲ್ಲಾ ರಂಗಮಂದಿರದಲ್ಲಿ ಶಾಲಾ ಮಕ್ಕಳಿಂದ ಫ್ಯಾನ್ಸಿ ಡ್ರೆಸ್ ಸ್ಪರ್ದೆ ನಡೆಸಿ ಬಹುಮಾನ ವಿತರಿಸಲಾಗುವದು, ಮತ್ತು ಪ್ರಾಥಮಿಕ ಮತ್ತು ಪ್ರೌಡ ಶಾಲಾ ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿ ಕುರಿತ ನೃತ್ಯ ರೂಪಕಗಳು, ಹಾಸ್ಯ ಸಂಜೆಯಂತಹ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವದು ಎಂದು ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯ್ಕ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Leave a Comment