ಹೊನ್ನಾವರ:”ಕೇವಲ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವುದರಿಂದ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಸಂಕನೂರು ಅಭಿಪ್ರಾಯಪಟ್ಟರು.
ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನಲ್ಲಿ ಯೂನಿಯನ್ ಹಾಗೂ ಜಿಮಖಾನಾ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಮನಸ್ಸು,ದೇಹ ಹಾಗೂ ಭಾವನೆಗಳ ಸಮತೋಲನ ಬೆಳವಣಿಗೆ ವ್ಯಕ್ತಿತ್ವದ ವಿಕಾಸಕ್ಕೆ ಕಾರಣವಾಗುತ್ತದೆ’ಎಂದು ಹೇಳಿದರು.
ವಿದ್ಯಾರ್ಥಿಗಳಲ್ಲಿ ಕ್ರೀಡೆ ಹಾಗೂ ಭಾರತೀಯ ಸಂಸ್ಕøತಿಯ ಪ್ರತೀಕಗಳಾದ ಜಾನಪದ,ಯಕ್ಷಗಾನ,ಭರತನಾಟ್ಯ ಮೊದಲಾದವುಗಳಲ್ಲಿ ಆಸಕ್ತಿ ಹೆಚ್ಚಬೇಕಿದೆ.ಜ್ಞಾನ ಹಾಗೂ ಕೌಶಲಗಳನ್ನು ಹೆಚ್ಚಿಸಿಕೊಂಡಲ್ಲಿ ಉದ್ಯೋಗ ಸುಲಭವಾಗಿ ಸಿಗುತ್ತದೆ.
ಪರಿಶ್ರಮ,ಪ್ರಾಮಾಣಿಕತೆ,ಅರ್ಪಣಾ ಮನೋಭಾವ,ಶಿಸ್ತು ಹಾಗೂ ವಿನಯ ಜೀವನದ ಯಶಸ್ಸಿಗೆ ಕಾರಣವಾಗುತ್ತದೆ.ಸಾಧನೆಯ ಮೂಲಕ ನಮ್ಮ ಅಸ್ತಿತ್ವವನ್ನು ತೋರಿಸಬೇಕು’ಎಂದು ಹೇಳಿದ ಅವರು,”ತಾನು ವಿಧಾನ ಪರಿಷತ್ಗೆ ಆಯ್ಕೆಯಾಗುವಲ್ಲಿ ಅಗತ್ಯ ಸಹಕಾರ ನೀಡಿದ ಎಸ್ಡಿಎಂ ವಿದ್ಯಾಸಂಸ್ಥೆಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಒದಗಿಸುತ್ತೇನೆ’ ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಡಾ.ಎಂ.ಪಿ.ಕರ್ಕಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಾಚಾರ್ಯ ಪ್ರೊ.ಎಸ್.ಎಸ್.ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರೊ.ಆರ್.ವಿ.ಹೆಗಡೆ ಸ್ವಾಗತಿಸಿದರು.ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು.ಉಪನ್ಯಾಸಕ ಪ್ರಶಾಂತ ಹೆಗಡೆ ಅತಿಥಿ ಪರಿಚಯ ಮಾಡಿದರು.ಪ್ರೊ.ಎಂ.ಆರ್.ನಾಯಕ ಪ್ರತಿಜ್ಞಾ ವಿಧಿ ಬೋಧಿಸಿದರು.ಉಪನ್ಯಾಸಕ ನಾಗರಾಜ ಹೆಗಡೆ ನಿರೂಪಿಸಿದರು.ಪ್ರೊ.ಜಿ.ಎಸ್.ಭಟ್ಟ ವಂದಿಸಿದರು.
Leave a Comment