ಕಾರವಾರ:
ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಮೂರು ಕಡಲ ತೀರ ಅಭಿವೃದ್ದಿಗೆ 92ಕೋಟಿ ಅನುಧಾನ ಬಿಡುಗಡೆ ಮಾಡಿರುವದಾಗಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಮಂಜುಳಾ ತಿಳಿಸಿದರು.
ಸ್ಥಳ ಪರಿಶೀಲನೆಗಾಗಿ ಬುಧವಾರ ಕಾರವಾರಕ್ಕೆ ಭೇಟಿ ನೀಡಿದ ಅವರು ಮಾದ್ಯಮದವರೊಂದಿಗೆ ಮಾತನಾಡಿದರು.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 9 ಕಡಲ ತೀರ ಅಭಿವೃದ್ದಿಗೆ ಪ್ರವಾಸೋದ್ಯಮ ಇಲಾಖೆ ಆಸಕ್ತಿ ವಹಿಸಿದೆ. ಪ್ರವಾಸೋಧ್ಯಮ ಬೆಳವಣಿಗೆಗೆ ಸ್ವಚ್ಚತೆ ಪ್ರಮುಖವಾಗಿದ್ದು, ಸ್ವಚ್ಚತೆ ಕಾಪಾಡಲು ಸ್ಥಳೀಯರು ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದು ಹೇಳಿದರು. ಕಡಲ ತೀರದ ಅಭಿವೃದ್ದಿ ಜವಾಬ್ದಾರಿಯನ್ನು ಜಿಲ್ಲಾಡಳಿತಕ್ಕೆ ವಹಿಸಲಾಗಿದೆ. ಅಧಿಕಾರಿಗಳ ಕಡಲ ತೀರಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಇದ್ದರು.
Leave a Comment