ಹೊನ್ನಾವರ:
ರಾಜ್ಯ ಯುವ ಮೋರ್ಚಾ ಸಂಘಟಿಸಿರುವ `ಮಂಗಳೂರು ಚಲೋ’ ಬೈಕ್ ರ್ಯಾಲಿಗೆ ರಾಜ್ಯ ಸರ್ಕಾರ ತಡೆಯೊಡ್ಡಿರುವುದನ್ನು ಖಂಡಿಸಿ ನೂರಾರು ಬಿಜೆಪಿ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಶರಾವತಿ ಸರ್ಕಲ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿ ಧಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೊನ್ನಾವರ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ನಾಯ್ಕ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರ ಮೇಲೆ ಸರಣಿ ಹತ್ಯೆ ನಡೆಯುತ್ತಿದ್ದು, ಇದಕ್ಕೆಲ್ಲಾ ಕುಮ್ಮಕ್ಕು ನೀಡುವ ಸಚಿವ ರಮಾನಾಥ ರೈ ಅವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ತಾಲೂಕಾಧ್ಯಕ್ಷ ಸುಬ್ರಾಯ ನಾಯ್ಕ ಮಾತನಾಡಿ ಉಸ್ತುವಾರಿ ಸಚಿವ ರಮಾನಾಥ ರೈ ಅವರು ದೇಶದ್ರೋಹಿ ಸಂಘಟನೆಗೆ ಪ್ರಚೋದನೆ ನೀಡುವ ಕೆಲಸ ಮಾಡುತ್ತಿದ್ದು, ತಮ್ಮ ಮಂತ್ರಿ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸದರು.
ಬಿಜೆಪಿ ಜಿಲ್ಲಾ ಒಬಿಸಿ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಮಾತನಾಡಿ ಆರ್ಎಸ್ಎಸ್ ಕಾರ್ಯಕರ್ತರು ದೇಶ ಭಕ್ತರು, ಸೈನಿಕರಿದ್ದಂತೆ ಇಂಥವರ ಮೇಲೆ ದಾಳಿ ನಡೆಯುತ್ತಿರುವುದು ಖಂಡನೀಯ. ದುಷ್ಕøತ್ಯ ಎಸಗಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದರು.
ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ, ಬಿಜೆಪಿ ತಾಲೂಕಾ ಪ್ರಧಾನ ಕಾರ್ಯದರ್ಶಿ ರಾಜು ಭಂಡಾರಿ, ಮಂಜುನಾಥ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ದೀಪಕ ಶೇಟ್, ಪ್ರಧಾನ ಕಾರ್ಯದರ್ಶಿ ಗಣಪತಿ ಗೌಡ ಚಿತ್ತಾರ, ಮುಖಂಡರಾದ ವೆಂಕಟ್ರಮಣ ಹೆಗಡೆ, ಉಮೇಶ ನಾಯ್ಕ, ಎಂ.ಎಸ್.ಹೆಗಡೆ, ಜಯಂತಿ ನಾಯ್ಕ, ಗಣಪತಿ ನಾಯ್ಕ ಬಳ್ಕೂರು, ಶಿವರಾಜ ಮೇಸ್ತ, ಉಲ್ಲಾಸ ಶಾನಭಾಗ, ವಿಘ್ವೇಶ್ವರ ಹೆಗಡೆ, ವಿನಾಯಕ ಆಚಾರಿ, ಸೇರಿದಂತೆ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆಗೊಳಿಸಿದರು. ಸಿಪಿಐ ಕುಮಾರಸ್ವಾಮಿ, ಪಿಎಸ್ಐ ಆನಂದಮೂರ್ತಿ ನೇತೃತ್ವದಲ್ಲಿ ನೂರಾರು ಪೊಲೀಸ್ ಸಿಬ್ಬಂದಿಗಳು ಬಿಗಿ ಬಂದೋಬಸ್ತ ಏರ್ಪಡಿಸಿದ್ದರು.
Leave a Comment