ಭಟ್ಕಳ:
ಪತ್ರಕರ್ತೆ ಗೌರೀಶ ಲಂಕೇಶ್ ಅವರನ್ನು ಹಂತಕರು ಗುಂಡಿಟ್ಟು ಕೊಂದಿದ್ದು ಅಘಾತಕಾರಿ ಹಾಗೂ ಖಂಡನೀಯ, ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ಎಸ್.ಐ.ಒ. ಭಟ್ಕಳ ಶಾಖೆ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
ಇದು ಓರ್ವ ವ್ಯಕ್ತಿಯ ಹತ್ಯೆಯಲ್ಲ ಬದಲಾಗಿ ಇದೊಂದು ವಿಚಾರಧಾರೆಯ ಹತ್ಯೆಯಾಗಿದ್ದು ಕೂಡಲೆ ಹಂಕರನ್ನು ಬಂಧಿಸಬೇಕು, ತನಿಖೆಯನ್ನು ಸಿಬಿಐ ಗೆ ವಹಿಸಬೇಕೆಂದು ಮನವಿಯಲ್ಲಿ ಸರ್ಕಾರವನ್ನು ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಎಸ್.ಐ.ಓ ಭಟ್ಕಳ ಶಾಖೆಯ ಅಧ್ಯಕ್ಷ ಎಸ್.ಎಂ.ಸೈಯ್ಯದ್ ಝುಹೇರ್, ಕಾರ್ಯದರ್ಶಿ ಅಬೂದ್ ರುಕ್ನುದ್ದೀನ್, ಸನಾವುಲ್ಲಾ ಅಸದಿ, ನಸೀಫ್ ಇಕ್ಕೇರಿ, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮುಜಾಹಿದ್ ಮುಸ್ತಫಾ, ಜಿಲ್ಲಾ ಸಂಚಾಲಕ ತಲ್ಹಾ ಸಿದ್ದಿಬಾಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಹಾಯಕ ಕಮಿಷನರ್ ಅನುಪಸ್ಥಿತಿಯಲ್ಲಿ ಕಚೇರಿ ಸಹಾಯಕ ಎಲ್. ಎ. ಭಟ್ಟ ಮನವಿಯನ್ನು ಸ್ವೀಕರಿಸಿದರು.
Leave a Comment