ಕಾರವಾರ:
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ವಿವಿಧ ಪತ್ರಕರ್ತರ ಸಂಘದವರು ಬುಧವಾರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಬಿ ಹರಿಕಂತ್ರ ನೇತ್ರತ್ವದಲ್ಲಿ ಕಾರವಾರದ ªಮಾದ್ಯಮದವರು ಜಿಲ್ಲಾಧಿಕಾರಿ ಎಸ್.ಎಸ್ ನಕುಲರನ್ನು ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಿದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಪ್ಪು ಪಟ್ಟಿ ಧರಿಸಿ ಮಾದ್ಯಮದವರು ಪ್ರತಿಭಟನೆ ನಡೆಸಿದರು. ಪತ್ರಕರ್ತೆ, ವಿಚಾರವಾದಿ ಹಾಗೂ ಸಾಹಿತಿ ಗೌರಿ ಲಂಕೇಶರ ಹತ್ಯೆ ನಮಗೆಲ್ಲ ಆತಂಕ ತಂದಿದ್ದು, ಸಮಾಜ ತಲೆ ತಗ್ಗಿಸುವಂತಾಗಿದೆ. ಇಂತಹ ವಾತಾವರಣದಲ್ಲಿ ಪತ್ರಕರ್ತರು ಭಯ ಪಡೆಬೇಕಾದ ಪರಿಸ್ಥಿತಿ ಬಂದಿದೆ. ಈ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಶಿರಸಿ, ಯಲ್ಲಾಪುರ ಹಾಗೂ ಇನ್ನಿತರ ತಾಲೂಕುಗಳಲ್ಲಿಯೂ ವಿವಿಧ ಪತ್ರಕರ್ತ ಸಂಘದವರು ಸ್ಥಳೀಯ ಆಡಳಿತದ ಮೂಲಕ ಮನವಿ ಸಲ್ಲಿಕೆ ಮಾಡಿದರು.
Leave a Comment