ಹೊನ್ನಾವರ : ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗು ಶಿಕ್ಷಕರು ಪಾಲಕರು ನೀಡಬೇಕು ಇದರಿಂದ ಪ್ರತಿಭೆಗಳು ಬೆಳಗಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು
ಅವರು ಮಾರ್ಥೋಮಾ ಫ್ರೌಡ ಶಾಲೆಯಲ್ಲಿ ಜಿಲ್ಲಾಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ, ಹೊನ್ನಾವರ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಇರುವ ಆಸಕ್ತಿ ಗುರುತಿಸಿ ಪಾಲಕರು ಶಿಕ್ಷಕರು ಅವರಿಗೆ ಪೊತ್ಸಾಹ ನೀಡಬೇಕು. ಆಗ ಪ್ರತಿಭೆಗಳು ಬೆಳಗಲು ಸಾಧ್ಯ. ಪ್ರತಿಭಾಕಾರಂಜಿಯಲ್ಲಿ ಭಾಗವಹಿಸಿ ವಿಧ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ ಬೆಳಗುವಂತಾಗಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ತಾ.ಪಂ ಅಧ್ಯಕ್ಷ ಉಲ್ಲಾಸ ನಾಯ್ಕ ಮಾತನಾಡಿ ನಮ್ಮ ತಾಲೂಕಿನ ವಿಧ್ಯಾರ್ಥಿಗಳು ಬಹುಮುಖ ಪ್ರತಿಭೆಯುಳ್ಳವರು. ಇವರ ಪ್ರತಿಭೆಯನ್ನು ಗುರುತಿಸಿ ಎಲ್ಲರೂ ಪ್ರೋತ್ಸಾಹ ನೀಡಬೇಕು.ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಬಹುಮುಖ ಕಲೆಯ ಬಗ್ಗೆ ಆಸಕ್ತಿಯನ್ನುಂಟು ಮಾಡಲು ಶಿಕ್ಷಕರು ಪಾಲಕರು, ಜನಪ್ರತಿನಿಧಿಗಳು ಸಹಕರಿಸಬೇಕು ಎಂದರು. ತಾಲೂಕಿನ ಪ್ರಶಸ್ತಿಪುರಸ್ಕ್ರತ ಶಿಕ್ಷಕರಿಗೆ, ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ದಾನ ಪಡೆದ ಮಾರ್ಥೋಮಾ ಪ್ರೌಢ ಶಾಲೆಯ ವಿಧ್ಯಾರ್ಥಿನಿಯಾದ ಪ್ರಮತಾ ಭಟ್ಟ ಈಕೆಯ ಪರವಾಗಿ ತಾಯಿಯನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಪ.ಪಂ. ಅಧ್ಯಕ್ಷೆ ಜ್ಯೆನಾಬಿ ಸಾಬ್, ಜಿ.ಪಂ.ಸದಸ್ಯೆ ಪುಷ್ಪಾ ನಾಯ್ಕ,ತಾ.ಪಂ ಉಪಾಧ್ಯಕ್ಷೆ ಲಲಿತಾ ನಾಯ್ಕ, ಮಾರ್ಥೊಮಾ ಶಾಲೆಯ ಪ್ರಾಚಾರ್ಯ ಫಾದರ ಜೊನ್ ಉಮನ್, ಕೆ.ಸಿ.ವರ್ಗಿಸ್, ತಾಲೂಕಾ ಶಿಕ್ಷಕ ಸಂಘದ ಅಧ್ಯಕ್ಷ ಎನ್.ಎಸ್.ನಾಯ್ಕ,ಎಸ್.ಎನ್.ಗೌಡ,ಸಾಧನಾ ಬರ್ಗಿ,ಮಹೇಶ ಶೆಟ್ಟಿ,ಇತರರು ಉಪಸ್ದಿತರಿದ್ದರು.ಕ್ಷೆತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸ್ವಾಗತಿಸಿದರು.ನಂತರ ತಾಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿಧ್ಯಾರ್ಥಿಗಳ ವಿವಿಧ ಸ್ಪರ್ಧೆಗಳು ನಡೆದವು.
Leave a Comment