ಕಾರವಾರ: 2017-18ನೇ ಸಾಲಿನಲ್ಲಿ ಎಸ್ಸಿಎಸ್ಪಿ ವಿಶೇಷ ಘಟಕ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಪದವಿ ಅಥವಾ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿ ಯುವಕ ಯುವತಿಯರಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ನೆರವಾಗುವಂತೆ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಅಪ್ರೆಂಟೀಸ್ ತರಬೇತಿಗೆ ನಿಯಮಾನುಸಾರ ಆಯ್ಕೆ ಮಾಡಲಾಗುವುದು. ಉತ್ತರ ಕನ್ನಡ ಜಿಲ್ಲೆಯವರಿಗೆ ಮೊದಲ ಆದ್ಯತೆ ಇದ್ದು ಅಭ್ಯರ್ಥಿಗಳು ಕನ್ನಡ ಭಾಷಾ ಜ್ಞಾನ ಹಾಗೂ ಗಣಕ ಯಂತ್ರದ ಜ್ಞಾನ ಹೊಂದಿರಬೇಕು. ವಯೋಮಿತಿ 22 ವರ್ಷದಿಂದ 38 ವರ್ಷದವರಾಗಿರಬೇಕು ಹಾಗೂ ಯಾವುದೇ ಉದ್ಯೋಗದಲ್ಲಿರಬಾರದು.
ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ 20 ಸಾವಿರ ರೂ. ಶಿಷ್ಯವೇತನ ನೀಡಲಾಗುವುದು. ಆಸಕ್ತರು ನಿಗದಿತ ಅರ್ಜಿ ನಮೂನೆಯಲ್ಲಿ ಸೂಕ್ತ ದಾಖಲೆಯೊಂದಿಗೆ ದಿನಾಂಕ 16-09-2017 ಸಂಜೆ 5ಗಂಟೆಯೊಳಗೆ ಸಹಾಯಕ ನಿರ್ದೆಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉತ್ತರ ಕನ್ನಡ ಜಿಲ್ಲೆ, ಕಾರವಾರ ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಹಾಗೂ ಅರ್ಜಿ ನಮೂನೆಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಭವನ, ಕಾರವಾರ. ದೂರವಾಣಿ 08382-226344 ಇಲ್ಲಿ ಸಂಪರ್ಕಿಸಬಹುದಾಗಿದೆ.
Leave a Comment