ಕಾರವಾರ:
ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಸ್ವಚ್ಛ ಭಾರತ ಮಿಷಿನ್ನಡಿ ಸಪ್ಟೆಂಬರ್ 16 ರಿಂದ ಸಪ್ಟೆಂಬರ್ 30 ರವರೆಗೆ ಎಲ್ಲಾ ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಮತ್ತು ನಗರ ಪ್ರದೇಶದಲ್ಲಿ ನಗರ ಸಂಸ್ಥೆಯ ಸಹಯೋಗದಿಂದ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವ ಹಾಗೂ ಜಾಗೃತಿ ಮೂಡಿಸಲಾಗುವುದು. ಪ್ರವಾಸಿ ಮಿತ್ರರ ಸಹಯೋಗದಿಂದ ಅರಿವು ಮೂಡಿಸುವ ಕಾರ್ಯಕ್ರಮ, ಶಾಲಾ ಮಕ್ಕಳಿಂದ ಜಾಥಾ ನಡೆಸಿ ಶಾಲಾ ಹಾಗೂ ಕಾಲೇಜುಗಳಲ್ಲಿ ಸ್ವಚ್ಛತೆ ಕಾಪಾಡುವ ಹಾಗೂ ಜಾಗೃತಿ ಮೂಡಿಸುವ ಬಗ್ಗೆ ಆಂದೋಲನ ಹಮ್ಮಿಕೊಳ್ಳಲಾಗುವುದು. ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Leave a Comment