ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಇಂಟರ್ಯಾಕ್ಟ್ ಸಂಘದ ವತಿಯಿಂದ ವಿನೂತನವಾಗಿ ‘ಹಿಂದಿ ದಿವಸ್’ ವನ್ನು ಆಚರಿಸಲಾಯಿತು. ಹಿಂದಿ ಭಾಷೆಯ ಮಹತ್ವವನ್ನು ಸಾರುವ ಘೋಷಣೆಗಳ ಜೈಕಾರ ಹಾಕಲಾಯಿತು. ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಜಾರಿಗೆ ತಂದ ದಿನ() ವನ್ನು ಹಿಂದಿ ದಿವಸ್ವನ್ನಾಗಿ ಆಚರಿಸಲಾಗುತ್ತದೆ. ಹಿಂದಿ ಭಾಷೆಯ ಮಹತ್ವ ಸಾರುವ ಭಿತ್ತಿ ಚಿತ್ರಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಶಾಲೆಯ ಹಿಂದಿ ಶಿಕ್ಷಕರಾದ ಶ್ರೀ ರಾಘವೇಂದ್ರ ಹೆಗಡೆ ಕಾರ್ಯಕ್ರಮ ಆಯೋಜಿಸಿದ್ದರು. ಶಾಲಾ ಮುಖ್ಯಾಧ್ಯಾಪಕರಾದ ಶ್ರೀ ವಿ. ಎಸ್. ಅವಧಾನಿ ಉಪಸ್ಥಿತರಿದ್ದರು. ಶಾಲಾ ಮಕ್ಕಳಿಗೆ ಹಿಂದಿ ಭಾಷೆಯ ಮಹತ್ವವನ್ನು ತಿಳಿಸುವಲ್ಲಿ ಇದೊಂದು ಉತ್ತಮ ಕಾರ್ಯಕ್ರಮವಾಗಿತ್ತು. ಶ್ರೀ ಬಿ.ಜೆ. ನಾಯ್ಕ ಹಾಗೂ ಶ್ರೀ ಯಶ್ವಂತ ಮೇಸ್ತ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
Leave a Comment