• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಕ್ಟೋಬರ್ 1ರಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ತರಗತಿಗಳನ್ನು ಮಾಜಾಳಿಯ ಹೊಸ ಕಟ್ಟಡದಲ್ಲಿ ನಡೆಸಲು ಕ್ರಮ

September 20, 2017 by Sachin Hegde Leave a Comment

ಕಾರವಾರ: ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ನಂತರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸುವ ಕೆಲಸ ಶುರುವಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 1ರಿಂದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ತರಗತಿಗಳನ್ನು ಮಾಜಾಳಿಯ ಹೊಸ ಕಟ್ಟಡದಲ್ಲಿ ನಡೆಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸರ್ಕಾರಿ ಎಂಜಿನಿಯರಿಂಗ್ ಮಹಾ ವಿದ್ಯಾಲಯದ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.
ನಗರದ ಹಾಸ್ಟೇಲ್‍ವೊಂದರಲ್ಲಿ ಶೋಚನೀಯ ಸ್ಥಿತಿಯಲ್ಲಿ ನಡೆಯುತ್ತಿದ್ದ ಇಂಜಿನಿಯರಿಂಗ್ ಕಾಲೇಜನ್ನು ಮಾಜಾಳಿಯಲ್ಲಿ ನಿರ್ಮಿಸಿದ ನೂತನ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಶಾಸಕ ಸತೀಶ್ ಸೈಲ್ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದ ವಿದ್ಯಾರ್ಥಿಗಳು, ಖಾಸಗಿ ಕಾಲೇಜು ಲಾಭಿಯಿಂದ ಸರ್ಕಾರಿ ಕಾಲೇಜು ಸ್ಥಳಾಂತರವಾಗುತ್ತಿಲ್ಲ ಎಂದು ದೂರಿದ್ದರು. ಮಾಜಾಳಿಯಲ್ಲಿ ಶಾಸಕ ಸತೀಶ್ ಸೈಲ್‍ಗೆ ಸೇರಿದ ಗಿರಿಜಾಬಾಯಿ ಸೈಲ್ ಇಂಜಿನಿಯರಿಂಗ್ ಕಾಲೇಜು ಇದ್ದು, ಸರ್ಕಾರಿ ಕಾಲೇಜನ್ನು ಅಲ್ಲಿಗೆ ಸ್ಥಳಾಂತರ ಮಾಡಿದಲ್ಲಿ ಖಾಸಗಿ ಕಾಲೇಜಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಇನ್ನು ಕಾಲೇಜು ಸ್ಥಳಾಂತರವಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಶೋಚನೀಯ ಪರಿಸ್ಥಿತಿಯಲ್ಲಿ ಕಲಿಯಬೇಕಿದೆ ಎಂದು ವಿದ್ಯಾರ್ಥಿಗಳು ವಿವರಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಶಾಸಕರೊಂದಿಗೆ ಸಭೆ ನಡೆಸಿ ಕಾಲೇಜು ಸ್ಥಳಾಂತರಕ್ಕೆ ಕ್ರಮ ಕೈಗೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ತರಗತಿಗಳನ್ನು ಹೊಸ ಕಟ್ಟಡದಲ್ಲಿಯೇ ಶೀಘ್ರ ಆರಂಭಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಅಕ್ಟೋಬರ್ 1ರಿಂದಲೇ ತರಗತಿಗಳನ್ನು ಹೊಸ ಕಟ್ಟಡದಲ್ಲಿ ಆರಂಭಿಸಲು ಬೇಕಿರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಪ್ರಾಚಾರ್ಯರಿಗೆ ತಿಳಿಸಿದರು. ಮಾಜಾಳಿಯಲ್ಲಿ ನಿರ್ಮಿಸಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹೊಸ ಕಟ್ಟಡ ತರಗತಿ ನಡೆಸಲು ಸಿದ್ಧಗೊಂಡಿದ್ದು ಸಾರಿಗೆ ಸಂಪರ್ಕ ಹಾಗೂ ವಿದ್ಯಾರ್ಥಿಗಳಿಗೆ ಪೂರಕ ಸೌಲಭ್ಯಗಳನ್ನು ಕಲ್ಪಿಸಬಹುದಾಗಿರುವುದರಿಂದ ಅಕ್ಟೋಬರ್ 1ರಿಂದಲೇ ತರಗತಿಗಳನ್ನು ಹೊಸ ಕಟ್ಟಡದಲ್ಲಿ ನಡೆಸಲು ತಾಂತ್ರಿಕ ಸಮಸ್ಯೆಗಳಿಲ್ಲ. ಎಂಜಿನಿಯರಿಂಗ್ ಕಾಲೇಜು ತಾತ್ಕಾಲಿಕವಾಗಿ ನಡೆಯುತ್ತಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿಯೇ ಪ್ರಯೋಗಾಲಯ ಸ್ಥಳಾಂತರ ಆಗುವವರೆಗೆ ಮುಂದುವರಿಸಬಹುದು. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.
ಪ್ರಸ್ತುತ ಹೊಸ ಎಂಜಿನಿಯರಿಂಗ್ ಕಾಲೇಜಿಗೆ ಲೋಕೋಪಯೋಗಿ ಇಲಾಖೆಯಿಂದ ಸಂಪರ್ಕ ರಸ್ತೆ ಮಂಜೂರು ಆಗಿದ್ದು ಶೀಘ್ರವೇ ರಸ್ತೆ ಸಂಪರ್ಕವೂ ಆಗಲಿದೆ. ಉಳಿದಂತೆ ಬಹುತೇಕ ಪೂರಕ ಮೂಲ ಸೌಲಭ್ಯಗಳು ಇದ್ದು, ಪ್ರಯೋಗಾಲಯ ಸ್ಥಳಾಂತರಕ್ಕೆ ಸಮಯಾವಕಾಶಬೇಕೆಂಬ ಪ್ರಾಂಶುಪಾಲರ ಸಲಹೆ ಮೇರೆಗೆ ತರಗತಿಗಳನ್ನು ಹೊಸ ಕಟ್ಟಡದಲ್ಲಿಯೂ ಹಾಗೂ ಪ್ರಯೋಗಾಲಯ ಸ್ಥಳಾಂತರ ಆಗುವವರೆಗೆ ಹಾಲಿ ತಾತ್ಕಾಲಿಕ ಕಟ್ಟಡದಲ್ಲೇ ನಡೆಸಬಹುದಾಗಿದೆ ಎಂದರು. ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಕನಿಷ್ಟ 4 ಸಾರಿಗೆ ಬಸ್‍ಗಳನ್ನು ಬೇರೆ ಬೇರೆ ಸಮಯದಲ್ಲಿ ಬಸ್ ನಿಲ್ದಾಣ ಹಾಗೂ ಮಾಜಾಳಿ ಎಂಜಿನಿಯರಿಂಗ್ ಕಾಲೇಜಿಗೆ ಓಡಿಸಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು. ಅಕ್ಟೋಬರ್ 1ರಿಂದ ತರಗತಿ ನಡೆಸಲು ಕಾಲೇಜು ಕಟ್ಟಡ ಪೂರ್ಣ ಸಿದ್ಧತೆಯೊಂದಿಗೆ ಕಾಲೇಜಿಗೆ ವಹಿಸುವಂತೆ ನಿರ್ಮಾಣ ಸಂಸ್ಥೆ ರೈಟ್ಸ್‍ಗೆ ಸೂಚಿಸಿದರು.
ಸಭೆಯಲ್ಲಿ ಶಾಸಕ ಸತೀಶ್ ಸೈಲ್ ಇದ್ದು ವಿವಿಧ ಸಲಹೆ ನೀಡಿದರು. ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ನಿತ್ಯಾನಂದ, ಕೆಆರ್‍ಐಡಿಎಲ್ ಉಪ ನಿರ್ದೇಶಕ ತೀರ್ಥಲಿಂಗಪ್ಪ, ರೈಸ್ ಸಂಸ್ಥೆಯ ಪ್ರಾಜೆಕ್ಟ್ ಎಂಜಿನಿಯರ್ ಸಿ.ಜೆ.ರಮೇಶ್, ಕಾರವಾರ ಕೆಎಸ್‍ಆರ್‍ಟಿಸಿ ಡಿಪೋ ಮ್ಯಾನೇಜರ್ ತುಷಾರ್ ಮತ್ತಿತರರು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Karwar News Tagged With: ಅಕ್ಟೋಬರ್ 1ರಿಂದ, ಇಂಜಿನಿಯರಿಂಗ್ ಕಾಲೇಜ, ಕಾಲೇಜು ತರಗತಿ, ಖಾಸಗಿ ಕಾಲೇಜು ಲಾಭಿ, ನಡೆಸಲು ಕ್ರಮ, ಪ್ರಯೋಗಾಲ, ಮಾಜಾಳಿಯ ಹೊಸ ಕಟ್ಟಡ, ವ್ಯಕ್ತಪಡಿಸಿದ್ದ ವಿದ್ಯಾರ್ಥಿಗಳು, ಸರ್ಕಾರಿ, ಸರ್ಕಾರಿ ಎಂಜಿನಿಯರಿಂಗ್, ಸೌಲಭ್ಯಗಳು ಇದ್ದು, ಹಾಸ್ಟೇಲ್‍ವೊಂದರಲ್ಲಿ ಶೋಚನೀಯ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar