• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರದಲ್ಲಿ ಮನೆಮನೆಗೆ ಕಾಂಗ್ರೇಸ್ ಯಶಸ್ವಿ

September 24, 2017 by Gaju Gokarna Leave a Comment

ಹೊನ್ನಾವರ :

ರಾಜ್ಯಾದ್ಯಂತ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಕರೆಕೊಟ್ಟಂತೆ ಮನೆಮೆನೆಗೆ ಕಾಂಗ್ರೆಸ್ ಕಾರ್ಯಕ್ರಮ ಹೊನ್ನಾವರದಲ್ಲಿ ಯಶಸ್ವಿಯಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎಸ್. ತೆಂಗೇರಿ ಹೇಳಿದರು.
ರಾಜ್ಯಾದ್ಯಂತ ಪ್ರತಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಉದ್ದೇಶದಿಂದ ಯಾವುದಾದರೊಂದು ಮತಗಟ್ಟೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಸುವಂತೆ ಕೆ.ಪಿ.ಸಿ.ಸಿ. ತಿಳಿಸಿತ್ತು. ಪ್ರತಿ ಮನೆಗೂ ಸಿದ್ದರಾಮಯ್ಯ ಸರಕಾರದ ಸಾಧನೆಗಳ ಸಂಗ್ರಹವಿರುವ ಕೈಪಿಡಿಯನ್ನು ತಲುಪಿಸುವಂತೆ ಮನವಿ ಮಾಡಿತ್ತು. ಮತ್ತು ಪ್ರತಿ ಮನೆಯ ಯಜಮಾನರಿಂದ ಸರಕಾರದ ಯೋಜನೆಗಳು ತಮಗೆ ತಲುಪಿದೆಯೇ ಎನ್ನುವ ಮಾಹಿತಿ ಸಂಗ್ರಹಿಸುವಂತೆ ತಿಳಿಸಿದಂv,É ಪ್ರತಿ ಮನೆಗೆ ಸರಕಾರದ ಸಾಧನಾ ಪುಸ್ತಿಕೆಯನ್ನು ನೀಡಿ ಅಗತ್ಯ ಮಾಹಿತಿ ಸಂಗ್ರಹಿಸಿದ ನಂತರ ಸೇರಿದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನಗರದ ಅಶುರಖಾನಗಲ್ಲಿ ಮತಗಟ್ಟೆಯ ಪ್ರತಿ ಮನೆಗೆ ಭೇಟಿ ನೀಡಿದಾಗ ಪ್ರತಿಯೊಬ್ಬರು ತುಂಬಾ ಅಭಿಮಾನದಿಂದ ಸ್ವಾಗತಿಸಿ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು ಎಂದು ಜಗದೀಪ ತೆಂಗೇರಿ ತಿಳಿಸಿದ್ದಾರೆ. ಇಂದು ಒಂದು ಮತಗಟ್ಟೆಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಮುಂದಿನ ತಿಂಗಳು 15 ತಾರೀಖಿನೊಳಗೆ ಪ್ರತಿ ಮತಗಟ್ಟೆಯ ಮನೆಮನೆಗೂ ಕಾಂಗ್ರೆಸ್ ಕಾರ್ಯಕರ್ತರು ತೆರಳಲಿದ್ದಾರೆ ಎಂದರು.

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ಆಗಮಿಸಿದ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡ ಮಾತನಾಡಿ ಸರಕಾರ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಬಡವರಿಗಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು ಸರಕಾರಕ್ಕೆ ಬಡವರ ಬಗ್ಗೆ ಇರುವ ಬದ್ದತೆಯನ್ನು ತೋರಿಸುತ್ತಿದೆ ಎಂದರು.

ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಕಾರ್ಯದರ್ಶಿ ರವಿಕುಮಾರ ಶೆಟ್ಟಿ ಮಾತನಾಡಿ ಸರಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಇತ್ತೀಚೆಗೆ ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಿ ರೈತರ ಸಂಕಷ್ಟವನ್ನು ದೂರ ಮಾಡಿದೆ ಎಂದರು.

ಶಾಸಕಿ ಶಾರದಾ ಶೆಟ್ಟಿ ಮಾತನಾಡಿ ಕ್ಷೇತ್ರದಲ್ಲಿ ತುಂಬಾ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು ಅವರನ್ನು ಪುನಃ ಆಯ್ಕೆ ಮಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಹೊನ್ನಾವರದ ಅಶುರಖಾನ ಗಲ್ಲಿಯ ಪ್ರತಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ತಾರಾ ಗೌಡ. ರಾಜ್ಯಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಗಲಾ ನಾಯ್ಕ, ಹೊನ್ನಾವರ ಪಟ್ಟಣ ಪಂಚಾಯತ ಅಧ್ಯಕ್ಷೆ ಜೈನಾಬಿ ಸಾಬ, ನಗರ ಘಟಕದ ಅಧ್ಯಕ್ಷ ಕೇಶವ ಮೇಸ್ತ, ಕಡ್ತೊಕಾ ಗ್ರಾಮಪಂಚಾಯತ ಅಧಕ್ಷೆ ಶಾಂತಿ ನಾಯ್ಕ, ಮುಸಾ ಅಣ್ಣಿಗೇರಿ, ಸುರೇಶ ಮೇಸ್ತ, ಗಣಪತಿ ಮೇಸ್ತ, ಶ್ರೀಕಾಂತ ಮೇಸ್ತ, ಉಮಾ ಮೇಸ್ತ, ಕಾಂಗ್ರೆಸ್ ಮುಖಂಡರುಗಳಾದ ನಾರಣಪ್ಪ ಗೌಡ, ಕಡ್ತೊಕಾ ವಿನಾಯಕ ಶೇಟ್, ದಾಮೋದರ ನಾಯ್ಕ, ಮಂಜುನಾಥ ಶಾನಭಾಗ, ರಾಮನಾಥ ನಾಯ್ಕ, ರಮೇಶ ಶೆಟ್ಟಿ, ನಾಗವೇಣಿ ಗೌಡ, ಕೃಷ್ಣ ಅಂಬಿಗಾ, ಮೋಹನ ಮೇಸ್ತ, ನಿತ್ಯಾನಂದ ಪಾಲೇಕರ್.À ನೂರಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

watermarked DSC 0530 1 watermarked DSC 0554 1 watermarked DSC 0572 1 watermarked DSC 0575 watermarked DSC 0636 watermarked DSC 0641 watermarked DSC 0685

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News Tagged With: 15 ತಾರೀಖಿ, ಉಸ್ತುವಾರಿಯಾಗಿ ಆಗಮಿಸಿದ, ಕರ್ನಾಟಕ ಪ್ರದೇಶ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ, ಚಾಲನೆ ದೊರೆತಿದ್ದು, ಪ್ರತಿ ಮನೆಗೂ ಸಿದ್ದರಾಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಮುಂದಿನ ತಿಂಗಳು, ರಾಜ್ಯಾದ್ಯಂತ, ಸಾಧನಾ ಪುಸ್ತಿಕೆ, ಹೊನ್ನಾವರದಲ್ಲಿ ಮನೆಮನೆಗೆ ಕಾಂಗ್ರೇಸ್ ಯಶಸ್ವಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...