ಕಾರವಾರ:
ಧರ್ಮಸ್ಥಳಕ್ಕೆ ತೆರಳಿದ ವ್ಯಕ್ತಿಯೊಬ್ಬ ನಾಪತ್ತೆಯಾದ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಗರದ ಹರಿದೇವನಗರದ ನಿವಾಸಿ ಚಂದ್ರಶೇಖರ ಲಮಾಣಿ (36) ಕಾಣೆಯಾದವರು. ಇವರು ಸೆ.16ರಂದು ಧರ್ಮಸ್ಥಳಕ್ಕೆ ತೆರಳುವುದಾಗಿ ತಿಳಿಸಿ, ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಧರ್ಮಸ್ಥಳಕ್ಕೆ ಮುಟ್ಟಿದ ಬಳಿಕ ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಬಳಿಕ ಸಂಪರ್ಕಕ್ಕೆ ದೊರೆಯದೆ, ಮನೆಗೂ ವಾಪಸ್ ಆಗದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Leave a Comment