• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸ,ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ

October 3, 2017 by Sachin Hegde Leave a Comment

ಕಾರವಾರ:

ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸವಾಗಿದ್ದು ಸ್ವಚ್ಚತೆಯನ್ನುವದು ಜನಾಂದೋಲನವಾಗಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ ಹೇಳಿದರು.
ಸೋಮವಾರ ಮಾಜಾಳಿ ಕಡಲತೀರದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬರು ತಮ್ಮ ಮನೆ, ಓಣಿ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಇಡೀ ಊರು ಮತ್ತು ದೇಶ ಸ್ವಚ್ಛವಾಗಿರಲು ಸಾಧ್ಯವಿದೆ. ಇದು ಎಲ್ಲರ ಜವಾಬ್ದಾರಿಯೂ ಕೂಡ ಆಗಿರುತ್ತದೆ. ಜಿಲ್ಲೆಯಾದ್ಯಂತ ಸ್ವಚ್ಛತಾ ಸಪ್ತಾಹ ನಡೆಸಲಾಗುತ್ತಿದ್ದು, ಎಲ್ಲರೂ ಇದರಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಗಾಂಧಿಜಿಯವರು ಅಹಿಂಸೆ ಮತ್ತು ಶಾತಿಯಿಂದ ಸ್ವಾತಂತ್ರ್ಯ ಪಡೆದವರು. ಅವರ ಗ್ರಾಮ ಸ್ವರಾಜ್ಯ ವಿನೋಭಾ ಭಾವೆಯವರ ಶ್ರಮದಾನದ ಕಲ್ಪನೆ ನಮಗೆ ಆದರ್ಶವಾಗಬೇಕಿದೆ ಎಂದು ಹೆಳಿದರು.
ಶಾಸಕ ಸತೀಶ ಕೃಷ್ಣ ಸೈಲ್ ಮಾತನಾಡಿ ಮಹಾತ್ಮಾ ಗಾಂಧಿಜಿ ಮತ್ತು ಲಾಲಬಹುದ್ದರ ಶಾಸ್ತ್ರಿಯವರ ಜನ್ಮ ದಿನಾಚರಣೆ ಆಚರಿಸುವದರೊಂದಿಗೆ ಎಲ್ಲರೂ ತಮ್ಮು ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಜಿಲ್ಲೆಯು ಸುಂದರ ಕಡಲಕಿನಾರೆಗಳನ್ನು ಹೊಂದಿದ್ದು ಅವಗಳನ್ನು ಸ್ವಚ್ಚವಾಗಿಟ್ಟುಕೊಂಡು ಪಕ್ಕದ ಗೋವಾ ರಾಜ್ಯದಂತೆ ಜಿಲ್ಲೆಯನ್ನೂ ಕೂಡಾ ಪ್ರವಾಸಿ ತಾಣವನ್ನಾಗಿಸಿ ಅಭಿವೃಧ್ಧಿಪಡಿಸಬಹುದು. ಇದಕ್ಕಾಗಿ ಸಾಕಷ್ಟು ಅನುದಾನವೂ ದೊರತಿದೆ ಎಂದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಜಯಶ್ರೀ ಮೋಗೇರ, ನಗರಸಭೆ ಅದ್ಯಕ್ಷ ಗಣಪತಿ ನಾಯ್ಕ ಉಪಾದ್ಯಕ್ಷೆ ಲೀಲಾಬಾಯಿ ಠಾಣೇಕರ್, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಪೊಲೀಸ್ ವರಿಷ್ಟಾಧಿಕಾರಿ ವಿನಾಯಕ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್ ಚಂದ್ರಶೇಖರ ನಾಯಕ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರವಾರ ತಾಲೂಕ ಪಂಚಾಯತ್ ನಗರಸಭೆ ಕಾರವಾರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಾಜಾಳಿ ಕಡಲತೀರದಲ್ಲಿ ಸ್ವಚ್ಚತಾ ಕಾರ್ಯದ ಬಳಿಕ ಸಚಿವ ದೇಶಪಾಂಡೆ, ಶಾಸಕ ಸತೀಶ ಸೈಲ್. ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸವರಿಷ್ಠಾಧೀಕಾರಿ ಸಿ.ಇ.ಒ ಸೇರಿದಂತೆ ಗಣ್ಯವ್ಯಕ್ತಿಗಳು ನಗರಸಭಾ ಉದ್ಯಾವನದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಗರಸಭೆ ಆವರಣದಲ್ಲಿ ನಡೆದ ವೇಧಿಕೆ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಪಂಚರಿಷಿವಾಡಾದಲ್ಲಿ 34 ಮನೆ ನಿಮಾಣ ಮಾಡಲು ಸಚಿವ ದೇಶಪಾಂಡೆ ಅವರು ಶಂಕುಸ್ಥಾಪನೆ ಮಾಡಿದರು.ಮಹಾತ್ಮಾ ಗಾಂಜಿü ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ ಜನಪದ ವಿಶೇಷ ಸಂಚಿಕೆಯನ್ನು ಸಚಿವರು ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು
ಸಿ.ಎಸ್.ಆರ್. ಯೋಜನೆಯಡಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 97 ಹಾಸ್ಟೇಲಗಳ ವಿದ್ಯಾರ್ಥಿಗಳಿಗೆ ಬೆಡ್‍ಶೀಟ ಮತ್ತು ಪಿಲ್ಲೊ ಕವರ್ಸ ವಿತರಿಸಲಾಯಿತು. ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹೇವಲ್ಸ್ ಕಂಪನಿಯ ಸಹಯೋಗದೊಂದಿಗೆ 12 ಜನ ಮತ್ತು ಜಿಲ್ಲಾ ಪಂಚಾಯತ ವತಿಯಿಂದ 29 ಜನ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ಸ್ಕೂಟರ್ ಸಚಿವರು ವಿತರಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Karwar News Tagged With: ಇದು ಪ್ರತಿಯೊಬ್ಬರ ಕೆಲಸ, ಓಣಿ, ಗಾಂಧಿ ಜಯಂತಿ ಕಾರ್ಯಕ್ರಮ, ಜನಾಂದೋಲನ, ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ, ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ನಗರಸಭೆ ಅದ್ಯಕ್ಷ ಗಣಪತಿ ನಾಯ್ಕ ಉಪಾದ್ಯಕ್ಷೆ ಲೀಲಾಬಾಯಿ ಠಾಣೇಕರ್, ಪೊಲೀಸ್, ಮನೆ, ಮಾಜಾಳಿ ಕಡಲತೀರ, ಸರಕಾರಿ ಕೆಲಸವಲ್ಲ, ಸುತ್ತಮುತ್ತಲಿನ ಪರಿಸರ, ಸ್ವಚ್ಚತೆ ಕೇವಲ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar