ಕಾರವಾರ: ಬಾಲ ಮಂದಿರ ಹಾಗೂ ಹಿಂದೂ ಪ್ರೌಡ ಶಾಲೆ ಆವರಣ ಕಾರವಾರದಲ್ಲಿ ಅಕ್ಟೋಬರ 6 ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಾತ್ಸೋವ 2017-18 ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಜಿಲ್ಲಾಡಳಿತ , ಜಿಲ್ಲಾ ಪಂಚಾಯತ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶೀಕ್ಷಣಾಧಿಕಾರಗಳ ಕಾರ್ಯಾಲಯ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ನೆರವೇರಿಸಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ವಿ ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಸತೀಶ ಕೆ. ಸೈಲ್ ಅಧ್ಯಕ್ಷತೆ ವಹಿಸುವರು. ಗೌರವ ಉಪಸ್ಥಿತರಾಗಿ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಇರುವರು. ಮುಖ್ಯ ಅತಿಥಿಗಳಾಗಿ ಶಾಸಕಿ ಶಾರದಾ ಮೋಹನ ಶೆಟ್ಟಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ, ವಿಧಾನ ಸಭಾ ಸದಸ್ಯರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವವರಾಮ ಹೆಬ್ಬಾರ ಮತ್ತಿತರು ಭಾಗವಹಿಸುವರು
Leave a Comment