ಕಾರವಾರ:
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೀಯಾಶೀಲ ಸಂಸ್ಥೆಗಳಿಂದ ಕುಮಟಾ ತಾಲೂಕಿನಲ್ಲಿ ಸಾಂತ್ವನ ಕೇಂದ್ರ ತೆರೆಯಲು ಅರ್ಜಿ ಆಹ್ವಾನಿಸಿದೆ.
ಇಚ್ಛೆಯುಳ್ಳ ಸಂಸ್ಥೆಯವರು ತಮ್ಮ ಸಂಸ್ಥೆಯ ಬೈಲಾಕಾಪಿ, ನೊಂದಣಿ ಪತ್ರ, 3 ವರ್ಷದ ಆಡಿಟ್ವರದಿ, ಆಡಳಿತ ವರದಿ, ಹಾಗೂ ಮಹಿಳೆಯ ಅಭಿವೃದ್ಧಿ ಕ್ಷೇತ್ರದಲ್ಲಿ ಹೆಚ್ಚಿನ ಕೆಲಸ ನಿರ್ವಹಿಸಿದ ಕುರಿತು ದಾಖಲಾತಿಗಳ ಪ್ರಸ್ತಾವನೆಯನ್ನು ಅಕ್ಟೋಬರ 21 ರೊಳಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರದಲ್ಲಿ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಹಾಗೂ ಆಯಾ ತಾಲೂಕಿನ ಶಿಶು ಅಭಿವ್ರದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಲು ಇಲಾಖೆ ಉಪನಿರ್ದೆಶಕರು ತಿಳಿಸಿದ್ದಾರೆ.
Leave a Comment